ಪಕ್ಷ ತೊರೆಯುವ ಯಾವುದೇ ಪ್ರಸ್ತಾಪ ನನ್ನ ಮುಂದೆ ಇಲ್ಲ ; ಪ್ರಮೋದ್ ಮಧ್ವರಾಜ್

Spread the love

ಪಕ್ಷ ತೊರೆಯುವ ಯಾವುದೇ ಪ್ರಸ್ತಾಪ ನನ್ನ ಮುಂದೆ ಇಲ್ಲ ; ಪ್ರಮೋದ್ ಮಧ್ವರಾಜ್

ಉಡುಪಿ: ಕೆಲವು ಮಾಧ್ಯಮಗಳು, ಪತ್ರಿಕೆಗಳು ವರದಿ ಮಾಡಿರುವಂತೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರುವ ಯಾವುದೇ ಪ್ರಸ್ತಾಪ ನನ್ನ ಮುಂದೆ ಇಲ್ಲ ಎಂದು ಮೀನುಗಾರಿಕಾ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದ್ದಾರೆ.

ಈ ವರದಿಗಳು ದುರುದ್ದೇಶಪೂರಕವಾಗಿದ್ದು, ಸತ್ಯಕ್ಕೆ ದೂರವಾಗಿದೆ. ತನ್ನ ಕಾಂಗ್ರೆಸ್ ಪಕ್ಷದ ಮೇಲೆ ಮತ್ತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಮೇಲಿರುವಂತಹ ವಿಶ್ವಾಸ ಮತ್ತು ನಿಷ್ಟೆ ಅಚಲವಾಗಿದೆ ಎಂದು ತಮ್ಮ ಮಾಧ್ಯಮ ಹೇಳಿಕೆಯಲ್ಲಿ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದ್ದಾರೆ.


Spread the love