ಪಡುಬಿದ್ರಿ| ಆಟೋ ರಿಕ್ಷಾ ಬಸ್ ನಡುವೆ ಅಪಘಾತ, ಓರ್ವ ಸಾವು 

Spread the love

ಪಡುಬಿದ್ರಿ| ಆಟೋ ರಿಕ್ಷಾ ಬಸ್ ನಡುವೆ ಅಪಘಾತ, ಓರ್ವ ಸಾವು 

ಉಡುಪಿ:  ಜಿಲ್ಲೆಯ ಪಡುಬಿದ್ರಿ ಕಾಂಜರಕಟ್ಟೆಯಲ್ಲಿ ಅಟೊ ರಿಕ್ಷಾಕ್ಕೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟಿದ್ದು, ರಿಕ್ಷಾ ಚಾಲಕ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಕಾರ್ಕಳದಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಪದ್ಮಾಂಬಿಕಾ ಬಸ್ಸು ಮತ್ತು ಪಕ್ಕದ ತಿರುವಿನಿಂದ ಬಂದ ರಿಕ್ಷಾವೊಂದು ಅಡ್ಡ ಬಂದಾಗ ಬಸ್ ರಿಕ್ಷಾಕ್ಕೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದು ಕೊಂಡು ರಸ್ತೆ ಪಕ್ಕ ನಿಂತಿದೆ. ಬಸ್ಸು ಪಕ್ಕದ ಕಮರಿಗೆ ಬಿದ್ದಿದ್ದರೆ ದೊಡ್ಡ ಅನಾಹುತ ಆಗುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಮೃತ ಪ್ರಯಾಣಿಕನ ಹೆಸರು ತಿಳಿದು ಬಂದಿಲ್ಲ. ಅಟೊ ಚಾಲಕ ಕಂಚಿನಡ್ಕ ನಿವಾಸಿ ಹಂಝ ಗಂಭೀರ ಗಾಯಗೊಂಡವರು ಎಂದು ಗುರುತಿಸಲಾಗಿದೆ.

ಬಸ್‌ ಢಿಕ್ಕಿ ಹೊಡೆದ ಪರಿಣಾಮ ಅಟೊ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ತಿಳಿದು ಬಂದಿದೆ.


Spread the love
Subscribe
Notify of

0 Comments
Inline Feedbacks
View all comments