Home Mangalorean News Kannada News ಪತ್ರಕರ್ತರಿಗೆ ನಿವೇಶನ ನೀಡಲು ತಕ್ಷಣ ಕ್ರಮ- ಸಚಿವ ಆರ್.ಅಶೋಕ್ ಭರವಸೆ 

ಪತ್ರಕರ್ತರಿಗೆ ನಿವೇಶನ ನೀಡಲು ತಕ್ಷಣ ಕ್ರಮ- ಸಚಿವ ಆರ್.ಅಶೋಕ್ ಭರವಸೆ 

Spread the love

ಪತ್ರಕರ್ತರಿಗೆ ನಿವೇಶನ ನೀಡಲು ತಕ್ಷಣ ಕ್ರಮ- ಸಚಿವ ಆರ್.ಅಶೋಕ್ ಭರವಸೆ 

ಮಂಗಳೂರು : ಪತ್ರಕರ್ತ ರಿಗೆ ನಿವೇಶನ ನೀಡಲು ಸರಕಾರ ತಕ್ಷಣ ಕ್ರ‌ಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಭರವಸೆ ನೀಡಿದ್ದಾರೆ.

ಪತ್ರಕರ್ತರಿಗೆ ನಿವೇಶನ ಒಸಗಿಸುವುದಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವರು ಪತ್ರಕರ್ತರಿಗೆ ನಿವೇಶನ ನೀಡುವ ಕುರಿತು ಬೆಂಗಳೂರಿನಿಂದಲೂ ಮನವಿ ಬಂದಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್ , ವೇದವ್ಯಾಸ್ ಕಾಮತ್,ಹರೀಶ್ ಪೂಂಜ, ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು .


Spread the love

Exit mobile version