ಪತ್ರಕರ್ತ ಮೊಹಮ್ಮದ್ ಅನ್ಸಾರ್ ಅವರಿಗೆ ‘ಬ್ರ್ಯಾಂಡ್  ಮಂಗಳೂರು ಪ್ರಶಸ್ತಿ’ 

Spread the love

ಪತ್ರಕರ್ತ ಮೊಹಮ್ಮದ್ ಅನ್ಸಾರ್ ಅವರಿಗೆ ‘ಬ್ರ್ಯಾಂಡ್  ಮಂಗಳೂರು ಪ್ರಶಸ್ತಿ’ 

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ವೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ಪತ್ರಕರ್ತರಿಗೆ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ವಿಜಯವಾಣಿ ಪತ್ರಿಕೆಯ ಮೊಹಮ್ಮದ್ ಅನ್ಸಾರ್ ಇನೋಳಿ ಆಯ್ಕೆಯಾಗಿದ್ದಾರೆ.

ವಿಜಯವಾಣಿಯಲ್ಲಿ 2019, ಮೇ 21ರಂದು ಪ್ರಕಟಗೊಂಡ ‘ ಸಂಬಂಧ ಗಟ್ಟಿಗೊಳಿಸಿದ ರಮಜಾನ್  ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.

ಹಿರಿಯ ಪತ್ರಕರ್ತರಾದ ಸುರೇಂದ್ರ ಶೆಟ್ಟಿ, ರವಿಪ್ರಸಾದ್ ಕಮಿಲ  ಮತ್ತು ಉಪನ್ಯಾಸಕಿ ಸ್ಮಿತಾ ಶೆಣೈ ಅವರನ್ನೊಳಗೊಂಡ ತೀರ್ಪುಗಾರರ  ಸಮಿತಿಯು ಈ ಆಯ್ಕೆ ನಡೆಸಿದೆ.

ಜುಲೈ1ರಂದು ಪತ್ರಿಕಾಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ   ಪ್ರಶಸ್ತಿ ಪ್ರದಾನ ಮಾಡಲಾಗುವುದು  ಎಂದು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love