ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಕಾರ್ಣಿಕ್ ಮತ್ತು ಆಯನೂರುಗೆ ಬಿಜೆಪಿ ಟಿಕೇಟ್

Spread the love

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಕಾರ್ಣಿಕ್ ಮತ್ತು ಆಯನೂರುಗೆ ಬಿಜೆಪಿ ಟಿಕೇಟ್

ಮಂಗಳೂರು: ರಾಜ್ಯ ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ತಲಾ ಮೂರು ಸ್ಥಾನಗಳಿಗೆ 2018ರ ಜೂನ್ ತಿಂಗಳಿನಲ್ಲಿ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿರಗಳನ್ನು ಘೋಷಿಸಿದೆ.

ನೈರುತ್ಯ ಪದವೀಧರ ಕ್ಷೇತ್ರಕ್ಕೆ ರಾಜ್ಯಸಭೆಯ ಮಾಜಿ ಸದಸ್ಯ ಆಯನೂರು ಮಂಜುನಾಥ್, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಅ. ದೇವೆಗೌಡ, ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಕೆ.ಬಿ.ಶ್ರೀನಿವಾಸ್ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಲಾಗಿದೆ.

ಅದೇ ರೀತಿ ನೈರುತ್ತ ಶಿಕ್ಷಕರ ಕ್ಷೇತ್ರಕ್ಕೆ ಹಾಲಿ ಸದಸ್ಯ ಕ್ಯಾ|ಗಣೇಶ್ ಕಾರ್ಣಿಕ್, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿ. ನಿರಂಜನಮೂರ್ತಿ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಾ|ಹಾಲನೂರು ಎಸ್. ಲೇಪಾಕ್ಷಿ ಅವರು ಬಿಜೆಪಿ ಅಭ್ಯರ್ಥಿಗಳಾಗಿದ್ದಾರೆ.

ವಿಧಾನ ಪರಷತ್ ನೈರುತ್ಯ ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ಮೇಲ್ಮನೆ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಬೆಂಗಳೂರು ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ರಾಮಚಂದ್ರ ಗೌಡ ಹಾಗೂ ಈಶಾನ್ಯ ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ಅಮರನಾಥ ಪಾಟೀಲ್, ನೈರುತ್ಯ ಶಿಕ್ಷಕರ ಕ್ಷೇತ್ರದ ಗಣೇಶ್ ಕಾರ್ಣಿಕ್ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ನ ಮರತಿಬ್ಬೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರ ಪ್ರತಿನಿಧಿಸುತ್ತಿರು ಜೆಡಿ ಎಸ್ ನ ರಮೇಶ್ ಬಾಬು ಅವರುಗಳ ಅವಧಿ 2018 ಜೂನ್ ಗೆ ಅಂತ್ಯಗೊಳ್ಳುವುದರಿಂದ ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.


Spread the love