ಪರಿವರ್ತನಾ ಸಮಾವೇಶ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಬೈಕ್ ರ್ಯಾಲಿ

Spread the love

ಪರಿವರ್ತನಾ ಸಮಾವೇಶ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಬೈಕ್ ರ್ಯಾಲಿ

ಉಡುಪಿ: ಕಾಂಗ್ರೆಸ್ ಪಕ್ಷದ ಜನಪರ ಕಾರ್ಯಕ್ರಮ ಜನರಿಗೆ ತಿಳಿಸಲು ಮತ್ತು ಲೋಕಸಭೆ ಚುನಾವಣೆಯ ಸಿದ್ದತೆ ಮತ್ತು ಪ್ರಚಾರ ಜನಸ್ಪಂದನ ರೂಪುರೇಷೆಗಳ ಬಗ್ಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಕಾಂಗ್ರೆಸ್ ಪರಿವರ್ತನಾ ಯಾತ್ರೆ ಮತ್ತು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿಯಾಗಿ ಮಾರ್ಚ್ 10 ರ ಭಾನುವಾರ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಯಿತು.

ಬೈಕ್ ರ್ಯಾಲಿಗೆ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರು ಹಸಿರು ನಿಶಾನೆ ನೀಡಿದರು. ಈ ವೇಳೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಬೈಕ್ ರ್ಯಾಲಿಯ ಉಸ್ತುವಾರಿ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಉಡುಪಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಒಬಿಸಿ ಮೋರ್ಚಾದ ಯತೀಶ್ ಕರ್ಕೇರಾ ಅವರು ಉಪಸ್ಥಿತರಿದ್ದರು.

ಬೈಕ್ ರ್ಯಾಲಿಗೆ ಅಂಬಲಪಾಡಿ ಅಭಿನಂದನ್ ಪೆಟ್ರೋಲ್ ಬಂಕ್ ನಿಂದ ಆರಂಭವಾಗಿಕರಾವಳಿ ಜಂಕ್ಷನ್ ಮೂಲಕ ಬನ್ನಂಜೆ ಮಾರ್ಗವಾಗಿ ಸಾಗಿ ಶಿರಿಬೀಡು, ಸಿಟಿಬಸ್ ನಿಲ್ದಾಣ, ಕಲ್ಸಂಕ ಮೂಲಕವಾಗಿ ಸಮಾವೇಶದ ರಾಯಲ್ ಗಾರ್ಡನ್ ಬಳಿ ಸಮಾಪನಗೊಂಡಿತು. ಬೈಕ್ ರ್ಯಾಲಿಯಲ್ಲಿ 500-600 ಬೈಕುಗಳು ಭಾಗವಹಿಸಿದ್ದವು.


Spread the love