ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ – ನಾಗರಾಜ್ ರಾವ್

Spread the love

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ – ನಾಗರಾಜ್ ರಾವ್

ಉಡುಪಿ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಹೆಸರಾಂತ ಮೊಬೈಲ್ ಕಂಪೆನಿಯಾದ ವೀವೋ ಉಡುಪಿ ಶಾಖೆಯ ವತಿಯಿಂದ ನಗರದ ಪ್ರೆಸ್ ಕ್ಲಬ್ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಆಚರಣೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಉಡುಪಿ ಪ್ರೆಸ್ ಕ್ಲಬ್ ಸಂಚಾಲಕ ನಾಗರಾಜ್ ರಾವ್ ಭೂಮಿಯಲ್ಲಿನ ಪ್ರತಿಯೊಂದು ಜೀವಿಗೆ ಪರಿಸರ ಅಗತ್ಯ. ಪ್ರತಿಯೊಬ್ಬರು ತಮ್ಮ ಮನೆಗಳ ಮುಂದೆ ಗಿಡ ನೆಡುವ ಮೂಲಕ ಪರಿಸರ ರಕ್ಷಿಸಬೇಕು. ಪರಿಸರ ರಕ್ಷಣೆ ಮಾಡುವುದರಿಂದ ಉಸಿರಾಟಕ್ಕೆ ಸ್ವಚ್ಛ ಗಾಳಿ ದೊರೆಯುತ್ತದೆ. ಉತ್ತಮ ಆರೋಗ್ಯಕ್ಕೆ ಉತ್ತಮ ಪರಿಸರ ಕೂಡ ಅಗತ್ಯ. ಪರಿಸರ ನಾಶದಿಂದ ನಮ್ಮ ನಾಶವಾಗುತ್ತದೆ. ಆದ್ದರಿಂದ ಪರಿಸರ ಸಂರಕ್ಷಣೆ ಮಾಡುವ ಹೊಣೆ ನಮ್ಮ ಮೇಲಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂತೋಷ್ ಸರಳೇಬೆಟ್ಟು, ಸಹಕಾರ್ಯದರ್ಶಿ ಮೈಕಲ್ ರೊಡ್ರಿಗಸ್, ವಿವೋ ಕಂಪೆನಿಯ ಅಧಿಕಾರಿಗಳಾದ ಅಖಿಲೇಶ್, ದೇವಿದಾಸ್, ಪ್ರಮೋದ್, ಗೋಪಾಲ್ ಹಾಗೂ ಇತರರು ಉಪಸ್ಥಿರಿದ್ದರು.


Spread the love