Home Mangalorean News Kannada News ಪುತ್ತೂರು; ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು; ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Spread the love

ಪುತ್ತೂರು; ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಖಾಸಗಿ ಶಾಲೆಯ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಪುತ್ತೂರಿನ ಖಾಸಗಿ ಶಾಲೆಯಲ್ಲಿ ಹತ್ತನೆ ತರಗತಿ ಒದುತ್ತಿದ್ದ ಸುಹಾಸ್ (15) ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿಯ ತಂದೆ ಕುಮಾರ್ ಪಶು ಇಲಾಖೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಅಸ್ವಸ್ಥರಾಗಿದ್ದ ತಾಯಿಯನ್ನು ಚಿಕಿತ್ಸೆಗೆಂದು ಮಂಗಳೂರಿಗೆ ಕರೆದುಕೊಂಡು ಹೋಗಿದ್ದಾಗ ಸುಹಾಸ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version