ಪುಲ್ವಾಮದ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಶ್ರದ್ಧಾಂಜಲಿ

Spread the love

ಪುಲ್ವಾಮದ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಶ್ರದ್ಧಾಂಜಲಿ

ಉಡುಪಿ: ಕಾಶ್ಮೀರದಲ್ಲಿ ಭಾರತೀಯ ಯೋಧರನ್ನು ಹತ್ಯೆಗೈದ ಉಗ್ರರ ವಿರುದ್ಧ ಉಡುಪಿ ಜಿಲ್ಲೆಯಾದ್ಯಂತ ತೀವ್ರ ಆಕ್ರೋಷ ವ್ಯಕ್ತವಾಗಿದೆ. ವಿವಿಧ ಸಂಘಟನೆಗಳಿಂದ ಅಲ್ಲಲ್ಲಿ ಪ್ರತಿಭಟನೆಗಳು, ಹುತಾತ್ಮ ಯೋಧರಿಗೆ ಗೌರವ, ನುಡಿನಮನ, ಶೃದ್ಧಾಂಜಲಿಯನ್ನು ಸಲ್ಲಿಸಲಾಗಿದೆ. ಎಲ್ಲೆಡೆ ಪಾಕ್ ಉಗ್ರರ ಹೇಡಿತನಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದ್ದು, ಈ ಘಟನೆಗೆ ಕಾರಣವಾದ ಪಾಕಿಸ್ತಾನದ ವಿರುದ್ಧ ಸರ್ಕಾರ ತಕ್ಷಣ ಉಗ್ರ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಹುತಾತ್ಮ ಸೈನಿಕರಿಗೆ ಕಾಂಗ್ರೆಸ್ ಯವ ಕಾರ್ಯಕರ್ತರು ಹಾಗೂ ನಾಯಕರು ಮೇಣದ ಬತ್ತಿಗಳನ್ನು ಹಚ್ಚಿ ಶ್ರದ್ದಾಂಜಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ಅಮೀನ್ ಹುತಾತ್ಮ ಯೋಧರಿಗೆ ನುಡಿನಮನ ಸಲ್ಲಿಸಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕಾರ್ಯದರ್ಶಿ ಹರೀಶ್ ಕಿಣಿ, ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೆಲ್ವಿನ್ ಡಿಸೋಜಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಕ್ರಿಸ್ಟನ್ ಡಿ ಆಲ್ಮೇಡಾ, ಕಾಂಗ್ರೆಸ್ ನಾಯಕರಾದ ಭಾಸ್ಕರ್ ರಾವ್ ಕಿದಿಯೂರು, ರಮೇಶ್ ಕಾಂಚನ್, ಇಸ್ಮಾಯಿಲ್ ಆತ್ರಾಡಿ, ಜೊಯೆಲ್ ಮಥಾಯಸ್, ಸ್ಟೀವನ್ ಕುಲಾಸೊ ಹಾಗೂ ಇತರರು ಉಪಸ್ಥಿತರಿದ್ದರು


Spread the love