ಪೇಜಾವರ ಶ್ರೀ ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆಗೆ ಸ್ಪಂದನೆ: ಕೆ.ಎಂ.ಸಿ ಆಸ್ಪತ್ರೆ ವೈದ್ಯರಿಂದ ಸ್ಪಷ್ಟನೆ

Spread the love

ಪೇಜಾವರ ಶ್ರೀ ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆಗೆ ಸ್ಪಂದನೆ: ಕೆ.ಎಂ.ಸಿ ಆಸ್ಪತ್ರೆ ವೈದ್ಯರಿಂದ ಸ್ಪಷ್ಟನೆ

ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅರೋಗ್ಯ ಸ್ಥಿತಿ ಗಂಭೀರವಾಗಿದ್ದರೂ, ಚಿಕಿತ್ಸೆಗೆ ಸ್ಪಂದಿಸುತಿದ್ದಾರೆ ಎಂದು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ತಂಡದ ನೇತೃತ್ವ ವಹಿಸಿರುವ ಡಾ.ಸುಧಾ ವಿದ್ಯಾ ಸಾಗರ್ ತಿಳಿಸಿದ್ದಾರೆ.

ಶುಕ್ರವಾರ ಸಾಯಂಕಾಲ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ವೈದ್ಯರ ತಂಡ ಶ್ರೀಗಳ ಆರೋಗ್ಯ, ಚಿಕಿತ್ಸೆ ಸಂಬಂಧಿಸಿ ಮಾಹಿತಿ ನೀಡಿದರು. ಶ್ರೀಗಳಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯದ ಬಗ್ಗೆ ನಿಖರ ಮಾಹಿತಿ ಒಂದೆರಡು ದಿನಗಳಲ್ಲಿ ತಿಳಿಸಲಾಗುವುದು. ಬೆಳಗ್ಗೆಗಿಂತ ಇಂದು ಆರೋಗ್ಯ ಸ್ಥಿತಿ ಸುಧಾರಣೆ ಕಂಡಿದೆ. ಆದರೆ ಈಗಲೆ ಏನು ಹೇಳಲು ಸಾದ್ಯವಿಲ್ಲ. ನಮ್ಮ ಚಿಕಿತ್ಸೆ ಮುಂದುವರೆದಿದೆ.

ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮಾತನಾಡಿ. ಶ್ರೀಗಳ ಚಿಕಿತ್ಸೆ ಮತ್ತು ಆರೋಗ್ಯ ಬಗ್ಗೆ ನಮಗೆ ಕಾಳಜಿ ಇದ್ದು, ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದು. ಶ್ರೀಗಳ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಸಂದರ್ಶಕರು ಹೆಚ್ಚಾಗಿ ಬರುತಿದ್ದಾರೆ. ಇದರಿಂದ ಅಡಚಣೆಯಾಗುತ್ತಿದೆ. ದಯವಿಟ್ಟು ಸಂದರ್ಶಕರು ಆಸ್ಪತ್ರೆಗೆ ಭೇಟಿ ನೀಡುವುದು ಬೇಡ. ಶ್ರೀಗಳ ಆರೋಗ್ಯದ ಮಾಹಿತಿಯನ್ನು ಪ್ರತಿ ದಿನ ಬೆಳಗ್ಗೆ ಮತ್ತು ಸಾಯಂಕಾಲ ಹೆಲ್ತ್ ಬುಲೆಟಿನ್ ಮೂಲಕ ತಿಳಿಸಲಾಗುವುದು ಎಂದು ತಿಳಿಸಿದರು.


Spread the love