ಪೇಜಾವರ ಸ್ವಾಮೀಜಿ ನಿಧನಕ್ಕೆ ಮಂಗಳೂರು ಬಿಷಪ್ ಸಂತಾಪ

Spread the love

ಪೇಜಾವರ ಸ್ವಾಮೀಜಿ ನಿಧನಕ್ಕೆ ಮಂಗಳೂರು ಬಿಷಪ್ ಸಂತಾಪ

ಮಂಗಳೂರು: ಭಾನುವಾರ ನಿಧನರಾದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ನಿಧನಕ್ಕೆ ಮಂಗಳೂರು ಕೆಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಪೀಟರ್ ಪಾವ್ಲ್ ಸಲ್ಡಾನಾ ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು ಧಾರ್ಮಿಕ ಮುಖಂಡರಾಗಿದ್ದು, ಸಮಾಜದ ಉನ್ನತಿಗಾಗಿ ಹಗಲಿರುಲು ಸೇವೆಸಲ್ಲಿಸಿ, ಪರರಿಗೆ ಒಳಿತು ಮಾಡುವ ದ್ಯೇಯದೊಂದಿಗೆ ಜೀವಿಸಿ, ನಮ್ಮನ್ನಗಲಿದ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇವೆ. ಅವರ ನಿಧನಕ್ಕೆ ನಾವು ಸಂತಾಪ ಸೂಚಿಸುತ್ತೇವೆ ಎಂದು ತಿಳಿಸಿದ್ದಾರೆ.


Spread the love