ಪೊಳಲಿ ದೇಗುಲದಲ್ಲಿ ರಾಜನಾಥ ಸಿಂಗ್‌ ಪ್ರಾರ್ಥನೆ

Spread the love

ಪೊಳಲಿ ದೇಗುಲದಲ್ಲಿ ರಾಜನಾಥ ಸಿಂಗ್‌ ಪ್ರಾರ್ಥನೆ

ಮಂಗಳೂರು: ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿ ದೇವಸ್ಥಾನಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಶನಿವಾರ ಭೇಟಿ ನೀಡಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಸಚಿವರೊಂದಿಗೆ ಶಾಸಕ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಉಳಿಪಾಡಿಗುತ್ತು ರಾಜೇಶ್ ನಾಯ್ಕ್, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ನಾಗರಾಜ ಶೆಟ್ಟಿ, ಬ್ರಹ್ಮಕಲಶೋತ್ಸವ-ಜೀರ್ಣೋದ್ಧಾರ-ಆಡಳಿತ ಸಮಿತಿಯ ಪದಾಧಿಕಾರಿಗಳು, ತಂತ್ರಿವರ್ಗ, ಅರ್ಚಕ ವರ್ಗದ ಸಿಬ್ಬಂದಿ ಇದ್ದರು.

ರಾಜೇಶ್ ನಾಯ್ಕ್ ದೇವಾಲಯದ ವಿಶೇಷತೆಗಳ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಿದರು. ಕೇಂದ್ರ ಸಚಿವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತ ಪೊಲೀಸ್ ಬಿಗು ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿತ್ತು. ಪರಿಣಾಮ, ಸಿಂಗ್ ಆಗಮನಕ್ಕೆ ಸ್ವಲ್ವ ಮುಂಚೆ ದೇವಸ್ಥಾನದ ಮುಖ್ಯ ದ್ವಾರದಿಂದ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿತ್ತು.


Spread the love