ಪ್ರತಿಯೊಬ್ಬರೂ ದೇಶದ ಬೆಳವಣಿಗೆಯಲ್ಲಿ ಪಾಲುದಾರರಾಗಬೇಕು – ಪದ್ಮಶ್ರೀ ಡಾ. ಎ. ಎಸ್. ಕಿರಣ್ ಕುಮಾರ್

Spread the love

ಪ್ರತಿಯೊಬ್ಬರೂ ದೇಶದ ಬೆಳವಣಿಗೆಯಲ್ಲಿ ಪಾಲುದಾರರಾಗಬೇಕು – ಪದ್ಮಶ್ರೀ ಡಾ. ಎ. ಎಸ್. ಕಿರಣ್ ಕುಮಾರ್

“ವಿಕ್ರಂ ಸಾರಾಭಾಯಿ ಹಾಗೂ ಹೋಮಿ ಜೆ ಬಾಬಾ ರಂತಹ ವ್ಯಕ್ತಿಗಳ ದೂರದೃಷ್ಟಿಯಿಂದ ಇಸ್ರೋ ಹುಟ್ಟಿಕೊಂಡಿತು. ಇಂದು ಭಾರತದ ಬೆಳವಣಿಗೆಯಲ್ಲಿ ಇಸ್ರೋ ಮಹತ್ತರ ಪಾತ್ರ ವಹಿಸಿದೆ. ದೇಶದ ಸಂಪರ್ಕ ಅಥವಾ ಸಂವಹನ ಕಾರ್ಯಕ್ರಮಗಳ ಬೆಳವಣಿಗೆಯಲ್ಲಾಗಲೀ, ಕೃಷಿ, ಮೀನುಗಾರಿಕೆ, ರಕ್ಷಣೆ, ಹವಾಮಾನ, ನ್ಯಾವಿಗೇಶನ್ ಮುಂದಾದ ಹತ್ತು ಹಲವು ಕ್ಷೇತ್ರಗಳ ಬೆಳವಣಿಗೆಯಲ್ಲಿ ಇದು ಸಹಕಾರಿಯಾಗಿದೆ. ಇಂದು ಸಾಮಾನ್ಯ ಜನರಿಗೂ ದೇಶದ ಅತ್ಯುನ್ನತ ತಂತ್ರಜ್ಞಾನ ಬಳಕೆಗೆ ಲಭಿಸುವಂತೆ ಇಸ್ರೋ ಮಾಡಿದೆ. ಭಾರತ ಕಳೆದ ಹಲವಾರು ವರ್ಷಗಳಿಂದ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಆದ ಸಾಮರ್ಥ್ಯವನ್ನು ಬೆಳೆಸುತ್ತಾ ಬಂದಿದೆ ಹಾಗೂ ಇಂದು ಜಗತ್ತಿನ ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅಗ್ರಗಣ್ಯ ರಾಷ್ಟ್ರಗಳಲ್ಲಿ ಒಂದಾಗಿದೆ. ಭಾರತದ ಉಪಗ್ರಹಗಳಲ್ಲದೆ 34 ಕ್ಕೂ ಹೆಚ್ಚು ರಾಷ್ಟ್ರಗಳ 450 ಕ್ಕೂ ಹೆಚ್ಚು ಉಪಗ್ರಹಗಳನ್ನು ಭಾರತ ಉಡಾವಣೆ ಮಾಡಿದೆ. ಚಂದ್ರಯಾನ, ಮಂಗಳಯಾನ, ಆದಿತ್ಯ ಮುಂತಾದ ಹಲವಾರು ಉಪಗ್ರಹ ಕಾರ್ಯಕ್ರಮಗಳ ಮೂಲಕ ಭಾರತದ ಸಾಮರ್ಥ್ಯವನ್ನು ಜಗತ್ತು ಇಂದು ಅರಿತುಕೊಂಡಿದೆ. ಜಗತ್ತಿನ ಎಲ್ಲಾ ದೇಶಗಳು ಮಿಲಿಟರಿ ಅವಶ್ಯಕತೆಗಳಿಗಾಗಿ ಬಾಹ್ಯಾಕಾಶ ಕಾರ್ಯಕ್ರಮಗಳನ್ನು ಪ್ರಾರಂಭಿಸಿದರೆ, ಸಾಮಾನ್ಯ ಜನರ ಅಥವಾ ದೇಶದ ಸಮಸ್ಯೆಗಳ ಪರಿಹಾರಕ್ಕಾಗಿ ಬಾಹ್ಯಾಕಾಶ ಕಾರ್ಯಕ್ರಮ ಪ್ರಾರಂಭಿಸಿದ ಏಕೈಕ ದೇಶ ಭಾರತ. ಮಾನವನನ್ನ ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ಗಗನಯಾನ ಭಾರತದ ಮುಂದಿರುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇಂದು ನಾವು ಪ್ರತಿಯೊಬ್ಬರೂ ಬಾಹ್ಯಾಕಾಶದ ಸಂಶೋಧನೆ ನಮ್ಮ ಹಂತದಲ್ಲಿ ಮಾಡಬೇಕಿದೆ ನಾವು ಪ್ರತಿಯೊಬ್ಬರೂ ವಿಜ್ಞಾನಿಯಾಗಬೇಕಿದೆ ಹಾಗೂ ದೇಶದ ಬೆಳವಣಿಗೆಯಲ್ಲಿ ಪಾಲುದಾದರಾಗಬೇಕಿದೆ.” ಎಂದು ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ISಖಔ ಮಾಜಿ ಅಧ್ಯಕ್ಷರಾದ ಪದ್ಮಶ್ರೀ ಡಾ. ಎ. ಎಸ್. ಕಿರಣ್ ಕುಮಾರ್ ಅವರು “ISಖಔ’s ಐegಚಿಛಿಥಿ ಚಿಟಿಜ ಃeಥಿoಟಿಜ” ಕಾರ್ಯಕ್ರಮದಲ್ಲಿ ಹೇಳಿದರು.

ಮಂಗಳೂರಿನ ರಾಮಕೃಷ್ಣ ಮಿಷನ್ ಹಾಗೂ ಸಮತಾ (ರಿ) ಮಹಿಳಾ ಬಳಗ, ಮಂಗಳೂರಿನ ಸಂಯುಕ್ತ ಆಶ್ರಯದಲ್ಲಿ “ISಖಔ’s ಐegಚಿಛಿಥಿ ಚಿಟಿಜ ಃeಥಿoಟಿಜ” ಎಂಬ ಶೀರ್ಷಿಕೆಯೊಂದಿಗೆ ವಿಶಿಷ್ಟ ಉಪನ್ಯಾಸ ಕಾರ್ಯಕ್ರಮ ಮಂಗಳೂರು ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯಿತು. ಬಾಹ್ಯಾಕಾಶದ ಸಾಧನೆಗಳ ಸುತ್ತ ಬೆಳಕು ಚೆಲ್ಲುವ, ವೈಜ್ಞಾನಿಕ ವಿಷಯಗಳು ಮತ್ತು ಪ್ರೇರಣಾದಾಯಿ ವಿಷಯಗಳನ್ನು ತಿಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರು ರಾಮಕೃಷ್ಣ ಮಿಷನ್ ಕಾರ್ಯದರ್ಶಿಗಳಾದ ಸ್ವಾಮಿ ಜಿತಕಾಮಾನಂದಜಿ ದಿವ್ಯಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದ ಕರ್ನಾಟಕ ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಘಾಟೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರಿನ ಸಮತಾ ಮಹಿಳಾ ಬಳಗದ ಅಧ್ಯಕ್ಷರಾದ ಕಾತ್ಯಾಯನಿ ಭಿಡೆ ವಹಿಸಿದ್ದರು. ISಖಔ ದ ಐಚಿuಟಿಛಿh ಗಿehiಛಿಟe Pಡಿogಡಿಚಿmme ಔಜಿಜಿiಛಿe ನ ಮಾಜಿ ನಿರ್ದೇಶಕರಾದ ಹಾಗೂ IISಛಿ ಬೆಂಗಳೂರು ನ ಮಾಜಿ ಪ್ರಾಧ್ಯಾಪಕರಾದ ಡಾ. ಎಂ. ಎಂ. ನಾಯಕ್, ಸಮತಾ ಮಹಿಳಾ ಬಳಗದ ಗೌರವಾಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ರಾವ್ ಹಾಗೂ ಕರ್ನಾಟಕ ವಿಧಾನ ಪರಿಷತ್ ನ ಸದಸ್ಯರಾದ ಡಾ. ಮಂಜುನಾಥ ಭಂಡಾರಿ ಅವರು ಅತಿಥಿಯಾಗಿ ಭಾಗವಹಿಸಿದ್ದರು. ಸಮತಾ ಬಳಗ ಹಾಗೂ ಮಂಗಳೂರು ರಾಮಕೃಷ್ಣ ಮಿಷನ್ ವತಿಯಿಂದ ಪದ್ಮಶ್ರೀ ಡಾ. ಕಿರಣ್ ಕುಮಾರ್ ಅವರಿಗೆ ಸನ್ಮಾನಿಸಲಾಯಿತು. ಸಂವಾದ ಕಾರ್ಯಕ್ರಮವನ್ನು ಸ್ವಚ್ಛ ಮಂಗಳೂರು ಅಭಿಯಾನದ ಮುಖ್ಯ ಸಂಯೋಜಕರಾದ ರಂಜನ್ ಬೆಳ್ಳರ್ಪ್ಪಾಡಿ ನಿರ್ವಹಿಸಿದರು. ಪ್ರಾಧ್ಯಾಪಕರಾದ ಸಂತೋಷ್ ಆಳ್ವ ಎಕ್ಕಾರು ಹಾಗೂ ಶ್ರೀಮತಿ ಅನುಪಮಾ ಅನಂತಮೂರ್ತಿ ಅವರು ನಿರ್ವಹಿಸಿದರು.

ಸ್ಪೇಸ್ ಆನ್ ವೀಲ್ಸ್ ಪ್ರದರ್ಶನ
ISಖಔ ದ ಇತಿಹಾಸ, ಸಾಧನೆಗಳು ಹಾಗೂ ಭವಿಷ್ಯದ ದೃಷ್ಟಿಕೋನದ ಕುರಿತು ಉಪನ್ಯಾಸದ ಜೊತೆಗೆ ಬೆಂಗಳೂರಿನ ಯು. ಆರ್. ರಾವ್ ಉಪಗ್ರಹ ಕೇಂದ್ರ, ಬೆಂಗಳೂರು ಇವರು ನಿರ್ವಹಿಸುವ ಚಲಂತ ವಿಜ್ಞಾನ ಪ್ರದರ್ಶನ SPಂಅಇ ಔಓ WಊಇಇಐS ನಡೆಯಿತು. ವಿಶೇಷವಾಗಿ ನಿರ್ಮಿಸಲಾದ ಬಸ್ ಒಂದು ಬೆಂಗಳೂರಿನಿAದ ಈ ಪ್ರದರ್ಶನಕ್ಕಾಗಿ ಆಗಮಿಸಿತ್ತು. ಸುಮಾರು 1000 ಕ್ಕೂ ಹೆಚ್ಚು ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಇದನ್ನು ವೀಕ್ಷಿಸಿದರು.


Spread the love
Subscribe
Notify of

0 Comments
Inline Feedbacks
View all comments