ಪ್ರಮೋದ್ ಮಧ್ವರಾಜ್ ವಿರುದ್ದ ಆರೋಪ ಮಾಡದಂತೆ ಟಿ ಜೆ ಅಬ್ರಾಹಾಂ ಗೆ ನ್ಯಾಯಾಲಯ ತಡೆಯಾಜ್ಞೆ

Spread the love

ಪ್ರಮೋದ್ ಮಧ್ವರಾಜ್ ವಿರುದ್ದ ಆರೋಪ ಮಾಡದಂತೆ ಟಿ ಜೆ ಅಬ್ರಾಹಾಂ ಗೆ ನ್ಯಾಯಾಲಯ ತಡೆಯಾಜ್ಞೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವಿರುದ್ದ ಯಾವುದೇ ಆರೋಪಗಳನ್ನು ಮಾಡದಂತೆ, ಮಾಧ್ಯಮಗಳಲ್ಲಿ ಪ್ರಕಟಿಸದಂತೆ, ಸಾಮಾಜಿಕ ಜಾಲತಾಣಗಳಲ್ಲೂ ಪ್ರಸಾರ ಮಾಡದಂತೆ ಬೆಂಗಳೂರಿನ ಆರಟಿಐ ಕಾರ್ಯಕರ್ತ ಟಿ ಜೆ ಅಬ್ರಾಹಾಂ ಅವರಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ತನ್ನ ವಿರುದ್ದ ಅಬ್ರಹಾಂ ಅವರು ಸುಳ್ಳು ಆಧಾರ ರಹಿತ, ಮಾನಹಾನಿಕರ ಆರೋಪಗಳನ್ನು ಮಾಡುತ್ತಿದ್ದು, ಇಂಥ ಆರೋಪಗಳನ್ನು ಮಾಡದಂತೆ ತಡೆಯಾಜ್ಞೆ ನೀಡಬೇಕೆಂದು ಪ್ರಮೋದ್ ಅವರು ನ್ಯಾಯಾಲಯದಲ್ಲಿ ಅರ್ಜಿಸಲ್ಲಿಸಿದ್ದರು.

ಪ್ರಮೋದ್ ಮಧ್ವರಾಜ್ ಪರವಾಗಿ ನ್ಯಾಯಾಲಯದಲ್ಲಿ ಹಾಜರಾದ ವಕೀಲರಾದ ದೇವರಾಜ್ ಶೆಟ್ಟಿ ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಈ ಕುರಿತು ಮಧ್ಯಂತರ ತಡೆಯಾಜ್ಞೆ ವಿಧಿಸಿ ಆದೇಶ ಹೊರಡಿಸಿದೆ
ಅಬ್ರಾಹಾಂ ಅವರಾಗಲಿ, ಅವರ ಕಡೆಯವರಾಗಲಿ, ಏಜೆಂಟ್ ಪ್ರತಿನಿಧಿಗಳಾಗಲಿ, ಅರ್ಜಿದಾರರ ವಿರುದ್ದ ಯಾವುದೇ ಮಾಧ್ಯಮ ಹೇಳಿಕೆ ನೀಡುವುದಾಗಲಿ, ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡುವುದಾಗಲಿ, ಸಾಮಾಜಿಕ ಜಾಲತಾಣ ಸೇರಿಂದತೆ ಟಿವಿ ವಾಹಿನಿಗಳು, ವೆಬ್ ಸೈಟ್ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಂ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಮಾಧ್ಯಮಗಳಲ್ಲಿ ಪ್ರಕಟಿಸುವುದನ್ನು ನಿರ್ಭಂದಿಸಿ ತಾತ್ಕಾಲಿಕ ತಡೆಯಾಜ್ಞೆಯನ್ನು ನ್ಯಾಯಾಲಯ ನೀಡಿದೆ

ಮುಂದಿನ ವಿಚಾರಣೆಯನ್ನು ಏಪ್ರಿಲ್ ತಿಂಗಳ 27ಕ್ಕೆ ನಡೆಯಲಿದೆ.


Spread the love