ಪ್ರವಾಸಕ್ಕೆ ತೆರಳುತ್ತಿದ್ದ ಬಸ್‌ ಪಲ್ಟಿಯಾಗಿ ವಿದ್ಯಾರ್ಥಿನಿ ಸಾವು, 20 ಮಕ್ಕಳಿಗೆ ಗಾಯ

Spread the love

ಪ್ರವಾಸಕ್ಕೆ ತೆರಳುತ್ತಿದ್ದ ಬಸ್‌ ಪಲ್ಟಿಯಾಗಿ ವಿದ್ಯಾರ್ಥಿನಿ ಸಾವು, 20 ಮಕ್ಕಳಿಗೆ ಗಾಯ

ಚಿಕ್ಕಮಗಳೂರು: ಶಾಲಾ ಪ್ರವಾಸ ಹಿನ್ನೆಲೆಯಲ್ಲಿ ಶೃಂಗೇರಿಗೆ ಆಗಮಿಸುತ್ತಿದ್ದ ಬಸ್‌ ಪಲ್ಟಿಯಾಗಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟು, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್‌ ಪಲ್ಟಿಯಾಗಿದ್ದು, ಸ್ಥಳದಲ್ಲಿಯೇ ದಿಯಾ(16) ಎಂಬ ವಿಧ್ಯಾರ್ಥಿನಿ ಮೃತಪಟ್ಟಿದ್ದಾಳೆ.

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಕೊಪ್ಪ ಸಮೀಪ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪೂರ್ಣಪ್ರಜ್ಞಾ ಶಾಲೆಗೆ ಸೇರಿದ ಬಸ್ ಎನ್ನಲಾಗಿದ್ದು, ಶಾಲಾ ಪ್ರವಾಸ ಹಿನ್ನೆಲೆ ಶೃಂಗೇರಿಗೆ ಆಗಮಿಸುತ್ತಿತ್ತು.

ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಎನ್.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love