ಫಾ. ಮಹೇಶ್ ಆತ್ಮಹತ್ಯೆ ಪ್ರಕರಣ – ಆರೋಪಿ ಡೇವಿಡ್ ಡಿಸೋಜಾ ಜಾಮೀನು ಅರ್ಜಿ ತಿರಸ್ಕೃತ

Spread the love

ಫಾ. ಮಹೇಶ್ ಆತ್ಮಹತ್ಯೆ ಪ್ರಕರಣ – ಆರೋಪಿ ಡೇವಿಡ್ ಡಿಸೋಜಾ ಜಾಮೀನು ಅರ್ಜಿ ತಿರಸ್ಕೃತ

ಉಡುಪಿ: ಶಿರ್ವ ಡೋನ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಾ. ಮಹೇಶ್ ಡಿಸೋಜಾ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ.

ಡೇವಿಡ್ ಡಿಸೋಜಾ ಪರ ವಕೀಲರು ಆರೋಪಿಗೆ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದು ಇದಕ್ಕೆ ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ ಆಕ್ಷೇಪ ಸಲ್ಲಿಸಿದ್ದರು. ಈ ಕುರಿತು ವಾದ ಮತ್ತು ಪ್ರತಿವಾದವನ್ನು ಆಲಿಸಿದ ಜಿಲ್ಲಾ ಸತ್ರ ನ್ಯಾಯಾಧೀಶ ಸಿ ಎಮ್ ಜೋಶಿ ಆರೋಪಿಗೆ ಜಾಮೀನು ತಿರಸ್ಕರಿಸಿ ಆದೇಶ ನೀಡಿದರು.


Spread the love