ಬಂಟ್ವಾಳದಲ್ಲಿ ಪ್ರೀತಿಸಿದ ಯುವತಿಯನ್ನು ಇರಿದು ಕೊಂದು ತಾನೂ ಆತ್ಮಹತ್ಯೆಗೈದ ಯುವಕ

Spread the love

ಬಂಟ್ವಾಳದಲ್ಲಿ ಪ್ರೀತಿಸಿದ ಯುವತಿಯನ್ನು ಇರಿದು ಕೊಂದು ತಾನೂ ಆತ್ಮಹತ್ಯೆಗೈದ ಯುವಕ

ಬಂಟ್ವಾಳ: ಯುವಕನೋರ್ವ ಪ್ರೀತಿಸಿದ ಯುವತಿಯನ್ನು ಚೂರಿಯಿಂದ ಇರಿದು ಕೊಲೆಗೈದು ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಕೊಯ್ಲದ ಪಾಂಡವಗುಡ್ಡೆಯಲ್ಲಿ ನಡೆದಿದೆ.

sujith-divya-murder-hang-pandavahudde-20170103

ಕೊಲೆಗೀಡಾದ ಯುವತಿಯನ್ನು ಬಂಟ್ವಾಳದ ಪುದನಗುಡ್ಡೆಯ ನಿವಾಸಿ ದಿವ್ಯ (23) ಹಾಗೂ ಯುವತಿಯನ್ನು ಕೊಲೆಗೈದು ಆತ್ಮಹತ್ಯೆಗೈದ ಯುವಕನನ್ನು ಕೊಯ್ಲದ ಕುಡಮಾಣಿ ನಿವಾಸಿ ಮೋಹನ ಪೂಜಾರಿಯವರ ಮಗ ಸುಜಿತ್ (28) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ದಿವ್ಯ ಮತ್ತು ಸುಜಿತ್ ಪರಸ್ಪರ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದು, ಇತ್ತೀಚೆಗೆ ಯುವತಿಯು ಪ್ರೀತಿಯನ್ನು ನಿರಾಕರಿಸಿ ಹುಡುಗನಿಂದ ದೂರವಾಗಿದ್ದಳು ಎಂದು ಹೇಳಲಾಗುತ್ತಿದೆ.

ಇದರಿಂದ ಕೋಪಗೊಂಡ ಯುವಕ ಯುವತಿಯನ್ನು ಪಾಂಡವಗುಡ್ಡೆಗೆ ಕರೆದುಕೊಂಡು ಹೋಗಿ, ಚೂರಿಯಿಂದ ಇರಿದು ಕೊಲೆಗೈದ ಬಳಕ ಪಕ್ಕದಲ್ಲಿರುವ ಗೇರು ಮರಕ್ಕೆ ತಾನೂ ಕೂಡ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love