ಬಂಟ್ವಾಳದಲ್ಲಿ ಯುವಕನ ಆತ್ಮಹತ್ಯೆ

Spread the love

ಬಂಟ್ವಾಳದಲ್ಲಿ ಯುವಕನ ಆತ್ಮಹತ್ಯೆ

ಬಂಟ್ವಾಳ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಮೂಡ ಗ್ರಾಮದ ಅಜ್ಜಿಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಂಟ್ವಾಳ ಪುರಸಭಾ ಸದಸ್ಯೆ ವಿದ್ಯಾವತಿ ಹಾಗೂ ಪ್ರಮೋದ್ ಕುಮಾರ್ ಅವರ ಪುತ್ರ ಪ್ರಶಾಂತ್ (25) ಎಂದು ಗುರುತಿಸಲಾಗಿದೆ.

ಕೊಲ್ಲಿ ರಾಷ್ಟ್ರದಲ್ಲಿ ಉದ್ಯೋಗಿಯಾಗಿದ್ದ ಪ್ರಶಾಂತ್, ಇತ್ತೀಚೆಗೆ ಊರಿಗೆ ಮರಳಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮಹಜರು ನಡೆಸಲಾಗಿದೆ.

ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love