Home Mangalorean News Kannada News ಬಸ್ಸಿಗೆ ಕಲ್ಲು ತೂರಾಟ ಮಾಡಿದ ವ್ಯಕ್ತಿಯ ಬಂದನ

ಬಸ್ಸಿಗೆ ಕಲ್ಲು ತೂರಾಟ ಮಾಡಿದ ವ್ಯಕ್ತಿಯ ಬಂದನ

Spread the love

ಬಸ್ಸಿಗೆ ಕಲ್ಲು ತೂರಾಟ ಮಾಡಿದ ವ್ಯಕ್ತಿಯ ಬಂದನ

ಮಂಗಳೂರು: ಸರಕಾರಿ ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಬೆಳ್ತಂಗಡಿ ತಾಲೂಕು ನಿವಾಸಿ ಬಿ ಮಹಮ್ಮದ್ ಶಬೀರ್ ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಕುಪ್ಪೆಟ್ಟಿ ಬಳಿ ಎಂಬಲ್ಲಿ ಜನವರಿ 20 ರಂದು ಕೆಎಸ್ಆರ್ಟಿಸಿ ಬಸ್ಸಿಗೆ ಕಲ್ಲು ತೂರಾಟ ಮಾಡಿ ಬಸ್ಸಿಗೆ ಹಾನಿ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.

ಉಪ್ಪಿನಂಗಡಿ ಠಾಣೆಯಲ್ಲಿ ತನಿಖೆ ಮುಂದುವರೆದಿದೆ.


Spread the love

Exit mobile version