ಬಾಳಿಗಾ ಕೊಲೆ ; ಐದನೇ ಆರೋಪಿ ಮಂಜುನಾಥ ಶೆಣೈ ಬಂಧನ

Spread the love

ಮಂಗಳೂರು: ನಗರದ ಕೊಡಿಯಾಲಬೈಲು ಬೆಸೆಂಟ್ ಸ್ಕೂಲ್ 2 ನೇ ಲೇನ್ ಸ್ಟರ್ಲಿಂಗ್ ಚೇಂಬರ್ ಹಿಂಬದಿ ರಸ್ತೆಯಲ್ಲಿ ನಡೆದ ವಿನಾಯಕ ಪಿ ಬಾಳಿಗಾ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 5 ನೇ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ
ಬಂಧಿತರನ್ನು ಮಣ್ಣಗುಡ್ಡೆ ನಿವಾಸಿ ಕೆ. ಮಂಜುನಾಥ ಶೆಣೈ @ ಮಂಜು (39) ಎಂದು ಗುರುತಿಸಲಾಗಿದೆ
ಈ ಕೃತ್ಯಕ್ಕೆ ಸಂಬಂಧಿಸಿ ಮಂಗಳೂರು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿರುತ್ತದೆ. ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳ ವಿಶೇಷ ತಂಡಗಳನ್ನು ರಚಿಸಿ ಪತ್ತೆ ಕಾರ್ಯ ನಡೆಸಲಾಗುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಆರೋಪಿ ನರೇಶ್ ಶೆಣೈಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಸ್ಥಳೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡುತ್ತಾ, ಆರೋಪಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಕೆ. ಮಂಜುನಾಥ ಶೆಣೈ ಎಂಬಾತನನ್ನು ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ರವರ ತಂಡ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಪ್ರಕರಣದ ತನಿಖಾಧಿಕಾರಿಯವರಿಗೆ ಹಸ್ತಾಂತರಿಸಿರುತ್ತಾರೆ. ಈ ಪ್ರಕರಣದಲ್ಲಿ ಉಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿರುತ್ತದೆ.


Spread the love