ಬಿಜೆಪಿ ಬೈಂದೂರು ಮಹಿಳಾ ಮೋರ್ಚಾ ವತಿಯಿಂದ ಉಚಿತ ನೇತ್ರ ತಪಾಸಣೆ

Spread the love

ಬಿಜೆಪಿ ಬೈಂದೂರು ಮಹಿಳಾ ಮೋರ್ಚಾ ವತಿಯಿಂದ ಉಚಿತ ನೇತ್ರ ತಪಾಸಣೆ

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಮತ್ತು ಮಹಿಳಾ ಮೋರ್ಚಾ ವತಿಯಿಂದ ನರೇಂದ್ರ ಮೋದಿಯವರ 70 ನೆ ಜನ್ಮ ದಿನಾಚರಣೆ ಅಂಗವಾಗಿ ಉಚಿತ ನೇತ್ರ ತಪಾಸಣೆ, ಪೊರೆ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರವು ಮಹಲಸಾ ಮಾಂಗಲ್ಯ ಆರ್ಕೇಡ್ ನಲ್ಲಿ ನಡೆಯಿತು.

ಶಿಬಿರದಲ್ಲಿ 410 ಜನರಿಗೆ ತಪಾಸಣೆ ಮಾಡಲಾಯಿತು. ಅದರಲ್ಲಿ 205 ಜನರಿಗೆ ಉಚಿತ ಕನ್ನಡಕ ಹಾಗೂ ಶಸ್ತ್ರ ಚಿಕಿತ್ಸೆಗೆ 70 ಜನರನ್ನು ನೋಂದಣಿ ಮಾಡಲಾಯಿತು.

ಉಚಿತ ನೇತ್ರ ತಪಾಸಣೆ, ಪೊರೆ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರವನ್ನು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯ್ಷತೆಯನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ್ ವಹಿಸಿದ್ದರು.

ವೇದಿಕೆಯಲ್ಲಿ ಪ್ರಸಾದ್ ನೇತ್ರಾಲಯದ ಡಾಕ್ಟರ್ ಕೃಷ್ಣ ಪ್ರಸಾದ್, ಮಹಿಳಾ ಮೋರ್ಚಾ ಉಸ್ತುವಾರಿ ಗೀತಾಂಜಲಿ ಸುವರ್ಣ, ಜಿಲ್ಲಾ ಪಂಚಾಯತ್ ಸದಸ್ಯರಾದ ಶೋಭಾ ಪುತ್ರನ್,ಬಾಬು ಶೆಟ್ಟಿ,ಸುರೇಶ್ ಬಟ್ವಾಡಿ,ತಾಲ್ಲೂಕು ಪಂಚಾಯತ್ ಸದಸ್ಯರಾದ ಶ್ಯಾಮಲಾ ಕುಂದರ್, ಮಂಡಲ ಕಾರ್ಯದರ್ಶಿ ಕಿಶೋರ್ ಶೆಟ್ಟಿ,ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತ ಬಾಲಕೃಷ್ಣ ಹಾಗೂ ಬೈಂದೂರು ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಂತಿ ಖಾರ್ವಿ ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ ಪ್ರಾಸ್ತಾವಿಕ ಭಾಷಣ ಮಾಡಿದರು, ಪ್ರಕಾಶ್ ಪೂಜಾರಿ ಯವರು ಧನ್ಯವಾದ ಅರ್ಪಿಸಿದರು.


Spread the love