ಬಿ. ಕೆ. ಗಣೇಶ್ ರೈಯವರಿಗೆ “ಸಂಸ್ಕೃತಿ ಶಿಲ್ಪಕಲಾ ರತ್ನ ಪ್ರಶಸ್ತಿ” ಪ್ರದಾನ
ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಮೊದಲಬಾರಿಗೆ ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿ ಬಿ.ಎ.ಪಿ.ಎಸ್. ಹಿಂದೂ ದೇವಾಲಯದಲ್ಲಿ ಮೇ 31ಮೇ 2025 ರಂದು ಗುರುವಂದನಾ ಸಂಸ್ಕöÈತಿ ಸಿಂಚನ ಕಾರ್ಯಕ್ರಮ ನಡೆಯಿತು. ಸನಾತನ ಸಾಂಸ್ಕöÈತಿ, ಕಲಾ ಆಧ್ಯಾತ್ಮಿಕ, ಗುರು ಪರಂಪರೆಯ ಕಾರ್ಯಕ್ರಮಕ್ಕೆ ಭಾರತದ ವಿವಿಧ ಭಾಗಗಳಿಂದ ಆಗಮಿಸಿದ್ದ ಪರಮ ಪೂಜ್ಯ ಮಠಾಧಿಪತಿಗಳು ಹಾಗೂ ಗಣ್ಯಾತಿ ಗಣ್ಯರು, ವಿವಿಧ ಕ್ಷೇತ್ರಗಳ ಸಾಧಕರುಗಳನ್ನು ಸುಮಂಗಲೆಯರಿAದ ಪೂರ್ಣ ಕುಂಭ, ವೇದಘೋಷ, ಪಂಚವಾದ್ಯಗಳೊAದಿಗೆ ಬಿ.ಎ.ಪಿ.ಎಸ್. ಹಿಂದೂ ಮಂದಿರದ ಅವರಣದಲ್ಲಿರುವ ಪ್ರಮುಖ್ ಸಭಾಂಗಣಕ್ಕೆ ಮೆರವಣಿಗೆಯ ಮೂಲಕ ಬರ ಮಾಡಿಕೊಳ್ಳಲಾಯಿತು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರುಗಳನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅಬುಧಾಬಿ ಹಿಂದೂ ಮಂದಿರದ ಮುಖ್ಯಸ್ಥರು ಪರಮ ಪೂಜ್ಯ ಶ್ರೀ ಬ್ರಹ್ಮವಿಹಾರಿ ದಾಸ್ ಸ್ವಾಮೀಜಿಯವರು, ಬೆಳಗಾವಿ ನಿಡಸೊಸಿ ಶ್ರೀ ಜಗದ್ಗುರು ದುರುದುಂಡೆಶ್ವರ ಮಠದ ಸ್ವಾಮಿಜಿ ಶ್ರೀ ಶ್ರೀ ಶ್ರೀ ನಿಜಲಿಂಗೇಶ್ವರ ಸ್ವಾಮಿಜಿ ಮತ್ತು ಗೋವಾ ರಾಜ್ಯದ ಶ್ರೀ ದತ್ತ ಪದ್ಮನಾಭ ಪೀಠದ ಪದ್ಮಶ್ರೀ ಪುರಸ್ಕöÈತ ಪೂಜ್ಯ ಶ್ರೀ ಶ್ರೀ ಸದ್ಗುರು ಬ್ರಹ್ಮೇಶನಂದನಾಚಾರ್ಯ ಸ್ವಾಮಿಜಿ, ಸ್ವಾಮಿಜಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸನಾತನ್ ವೇದಿಕ್ ಸಂಸ್ಥಾನದ ಗುರು ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಪ್ರೋಫೆಸರ್ ಸ್ವಾಮಿ ಚೈತನ್ಯಾನಂದ ಸರಸ್ವತಿಯವರ ಸಮ್ಮುಖದಲ್ಲಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಶ್ರೀ ಬಿ. ಕೆ. ಗಣೇಶ್ ರೈವರನ್ನು ಹಾಗೂ ಶ್ರೀಮತಿ ಮಂಜುಳಾ ಗಣೇಶ್ ರೈ ದಂಪತಿಗಳನ್ನು ವೇದಿಕೆಗೆ ಬರಮಾಡಿಕೊಂಡು “ಸಂಸ್ಕöÈತಿ ಶಿಲ್ಪಕಲಾ ರತ್ನ ಪ್ರಶಸ್ತಿ” ಪ್ರದಾನಿಸಿ ಗೌರವಿಸಿದರು.
ಮೂಲತ: ಮಡಿಕೇರಿಯವರಾದ ಗಣೇಶ್ ರೈಯವರು ಮೈಸೂರಿನಲ್ಲಿ ಚಿತ್ರಶಿಲ್ಪ ಕಲೆಯಲ್ಲಿ ತರಬೇತಿ ಪಡೆದಿರುವ ಕಲಾವಿದರು. ಮಡಿಕೇರಿ ಪುರಭವನದ ಎದುರಿನಲ್ಲಿರುವ ಕೊಡಗಿನ ಕುಲದೇವತೆ ಕಾವೇರಿ ಮಾತೆಯ ವಿಗ್ರಹವನ್ನು ನಿರ್ಮಿಸಿದವರು. ತಲಕಾವೇರಿಯಲ್ಲಿ ಪ್ರಥಮ ಬಾರಿಗೆ ಕಾವೇರಿ ಮಾತೆಯ ಚಿತ್ರವನ್ನು ಶಿವಕಾಶಿಯಲ್ಲಿ ಮುದ್ರಿಸಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪನವರಿಂದ ಬಿಡುಗಡೆ ಮಾಡಿಸಿದ್ದರು. ಇತ್ತಿಚೆಗೆ ಕಂಪ್ಯೂಟರ್ ಗ್ರಾಫಿಕ್ಸ್ ನಲ್ಲಿ ಕಾವೇರಿ ಮಾತೆಯ ಚಿತ್ರವನ್ನು ರಚಿಸಿ ಬಿಡುಗಡೆ ಮಾಡದ್ದಾರೆ. ಮಡಿಕೇರಿ ಗಣಪತಿ ಉತ್ಸವ ಮತ್ತು ದಸರಾ ಉತ್ಸವಕ್ಕೆ ಹಲವಾರು ವಿವಿಧ ಭಂಗಿಯಲ್ಲಿ ಪೇಪರ್ ಪಲ್ಪ್ ದೇವತಾ ಮೂರ್ತಿಗಳನ್ನು ನಿರ್ಮಿಸಿದ್ದರು. ಬಹುಮುಖ ಪ್ರತಿಭೆಯ ಗಣೇಶ್ ರೈಯವರು ಲೇಖಕ ಮತ್ತು ಬರಹಗಾರರಾಗಿದ್ದಾರೆ. ಇತ್ತಿಚೆಗೆ “ಕಡಲಾಚೆಯ ರಮ್ಯ ನೋಟ ದುಬಾಯಿ” ಕೃತಿಯನ್ನು ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮ ನಿರೂಪಕರಾಗಿಯೂ ಸಹ ಜನಮಾನಸದಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದಾರೆ.
ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸೇವೆ ಹಾಗೂ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಯು.ಎ.ಇ. ಘಟಕದ ಉಪಾಧ್ಯಕ್ಷರಾಗಿ ಹಾಗೂ ಹಲವಾರು ಸಂಘ ಸಂಸ್ಥೆಗಳಿಗೆ ಸಲಹೆಗಾರರಾಗಿದ್ದಾರೆ. ಸ್ವತಹ: ರಕ್ತದಾನಿಯಾಗಿರುವ ಗಲ್ಫ್ ನಾಡಿನಲ್ಲಿ ರಕ್ತದಾನ ಶಿಬಿರದ ಆಯೋಜನೆಯನ್ನು ಮಾಡಿರುವ ಇವರಿಗೆ ಯು.ಎ.ಇ. ಸರ್ಕಾರ ಪ್ರಶಂಸಾ ಪತ್ರವನ್ನು ನೀಡಿದೆ. ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಚಿತ್ರಕಲಾ ಅಧ್ಯಾಪಕರಾಗಿ ಮಾತು ವಿರಾಜಪೇಟೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಸಂಸ್ಥೆಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಇವರು ವಿದೇಶದ ಗಲ್ಫ್ ನಾಡಿನಲ್ಲಿ ಬಹುರಾಷ್ಟಿçÃಯ ಜಾಹಿರಾತು ಸಂಸ್ಥೆಯಲ್ಲಿ ಕ್ರಿಯಾತ್ಮಕ ಕಲಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಗಣೇಶ್ ರೈ ಕೆಲಿಯಾಡೋ ಸ್ಕೋಪ್ ಎಂಬ ಯೂಟ್ಯೂಬ್ ಚಾನೆಲ್ ಹೊಂದಿದ್ದು ಭಾರತ ಮತ್ತು ಗಲ್ಫ್ ನಾಡಿನ ಸಾಂಸ್ಕöÈತಿಕ ರಾಯಭಾರಿಯಾಗಿ ಎರಡು ದೇಶಗಳ ಬಾಂಧವ್ಯಕ್ಕೆ ಸಂಬAಧಿಸಿದ ನಿರ್ಮಾಣದ ನೂರಾರು ವೀಡಿಯೊಗಳು ವಿಶ್ವವ್ಯಾಪಿಯಾಗಿದೆ.
ಗಣೇಶ್ ರೈಯವರ ಬಹುಮುಖ ಪ್ರತಿಭೆಗೆ ದುಬಾಯಿ ಸರ್ಕಾರ ಹತ್ತು ವರ್ಷಗಳ ಕಲ್ಚರಲ್ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ.
“ಸಂಸ್ಕöÈತಿ ಶಿಲ್ಪಕಲಾ ರತ್ನ ಪ್ರಶಸ್ತಿ” ಸ್ವೀಕರಿಸಿರುವ ಗಣೇಶ್ ರೈಯವರು ತಮ್ಮ ಶಿಲ್ಪಕಲೆ, ಲೇಖನ, ಸಮಾಜಸೇವೆಯ ಪಯಣದಲ್ಲಿ ಆಶೀರ್ವಾದ, ಪ್ರೋತ್ಸಾಹ, ಬೆಂಬಲ ನೀಡಿರುವ ಸರ್ವರಿಗೂ ತಮ್ಮ ಹೃದಯಂತರಾಳದ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.