ಬೆಂಜನಪದವು ಬಳಿ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿ ತಯಾರಿಸುವ ಸಾಮಾಗ್ರಿ ವಶ –ಇಬ್ಬರ ಬಂಧನ

Spread the love

ಬೆಂಜನಪದವು ಬಳಿ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿ ತಯಾರಿಸುವ ಸಾಮಾಗ್ರಿ ವಶ –ಇಬ್ಬರ ಬಂಧನ

ಮಂಗಳೂರು: ಬೆಂಜನಪದವುನಲ್ಲಿ ಅಬಕಾರಿ ಇಲಾಖೆಯವರು ಅಕ್ರಮವಾಗಿರಿಸಿದ್ದ1200 ಲೀಟರ್ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿ ತಯಾರಿಸುವ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಶ್ರೀಮತಿ ಶೈಲಜಾ ಕೋಟೆ ರವರ ನಿರ್ದೇಶನದಂತೆ ಅಬಕಾರಿ ಅಧೀಕ್ಷಕರು ವಿನೋದ್ ಕುಮಾರ್ ರವರ ನೇತ್ರತ್ವದಲ್ಲಿ, ಬಂಟ್ವಾಳ ಉಪ ವಿಭಾಗದ ಉಪ ಅಧೀಕ್ಷಕರು ಗೀತಾ ರವರ ,ಮಾಗದಶನದಂತ ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕರು ವಿಜಯ್ ಕುಮಾರ್ , ಉಪ ನಿರೀಕ್ಷಕರು ಹಾಗೂ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಅಂಮುಂಜೆ ಗ್ರಾಮದ ಬೆಂಜನಪದವು ಎಂಬಲ್ಲಿ ಕ್ರಿಸ್ಟನ್ ಡಿಸೋಜ ರವರ ಮನೆಯ ಹಿಂಭಾಗದಲ್ಲಿ 1200 ಲೀಟರ್ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿ ತಯಾರಿಸುವ ಸಾಮಗ್ರಿ, 950 ಕೇಜಿ ಬೆಲ್ಲ ಮತ್ತು 500 ಲೀಟರ್ ನಕಲಿ ವೈನ್, 300 ಲೀಟರ್ ಬಟಾಟೆ ಮಿಶ್ರಣದ ಬೆಲ್ಲದ ಕೊಳೆಯನ್ನು ಜಫ್ತು ಪಡಿಸಲಾಯಿತು ಆರೋಪಿಗಳಾದ ಕಿರಣ್ ಕುಮಾರ್ ಮತ್ತು ಕ್ರಿಸ್ಟನ್ ಡಿಸೋಜ ರವರನ್ನು ದಸ್ತಗಿರಿ ಮಾಡಲಾಗಿದೆ,

ಸದರಿ ಪ್ರಕರಣವನ್ನು ಜಿಲ್ಲಾ ತಂಡದ ಅಬಕಾರಿ ಉಪ ನಿರೀಕ್ಷಕರು ಜಗನ್ನಾಥ ನಾಯ್ಕ ರವರು ದಾಖಲಿಸಿರುತ್ತಾರೆ


Spread the love