Home Mangalorean News Kannada News ಬೈಂದೂರು| ಅಕ್ರಮ ಜಾನುವಾರು ಸಾಗಾಟ ಆರೋಪ: ಮೂವರ ಬಂಧನ

ಬೈಂದೂರು| ಅಕ್ರಮ ಜಾನುವಾರು ಸಾಗಾಟ ಆರೋಪ: ಮೂವರ ಬಂಧನ

Spread the love

ಬೈಂದೂರು| ಅಕ್ರಮ ಜಾನುವಾರು ಸಾಗಾಟ ಆರೋಪ: ಮೂವರ ಬಂಧನ

ಬೈಂದೂರು: ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಯಡ್ತರೆ ಜಂಕ್ಷನ್ ಬಳಿ ಜೂ.5ರಂದು ಬೆಳಗಿನ ಜಾವ ಬಂಧಿಸಿದ್ದಾರೆ.

ಭಟ್ಕಳದ ನವಾಯತ್ ಕಾಲೋನಿಯ ಅಬ್ರಾರುಲ್ ಹಾಕ್ ಮೋಮಿನ್(30), ಭಟ್ಕಳ ಕೋಗ್ತಿಯ ಮೊಹಮ್ಮದ್, ಭಟ್ಕಳ ಜಾಲಿಯ ಆರೀಫ್ ಬಂಧಿತ ಆರೋಪಿಗಳು.

ಇವರು ಕೊಲ್ಲೂರು ಕಡೆಯಿಂದ ಭಟ್ಕಳ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ 10 ಜಾನುವಾರುಗಳನ್ನು ಬೆಂಗಾವಲು ವಾಹನ ಕಾರಿನೊಂದಿಗೆ ಸಾಗಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, 10 ಜಾನುವಾರುಗಳನ್ನು ರಕ್ಷಿಸಿ, ಮೂವರನ್ನು ಮತ್ತು ಲಾರಿ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version