ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ

Spread the love

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ

ಉಡುಪಿ: ಚೀನಾ-ಭಾರತ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ದೇಶದ ಭದ್ರತೆಯ ವಿಚಾರದಲ್ಲಿ ಎಲ್ಲಾ ಪಕ್ಷಗಳು ಸರಕಾರದ ಕೆಲಸಗಳಿಗೆ ಸಹಕಾರ ನೀಡುತ್ತಿದ್ದು ಚೀನಾದ ವರ್ತನೆಗೆ ಭಾರತ ಸರಕಾರ ಸೂಕ್ತ ಪ್ರತ್ಯುತ್ತರ ನೀಡಬೇಕು ಎಂದರು

ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಪ್ರಖ್ಯಾತ್ ಶೆಟ್ಟಿ ಮಾತನಾಡಿ ವೀರ ಯೋಧರಿಗೆ ನುಡಿ ನಮನ ಸಲ್ಲಿಸಿ ನಮ್ಮ ದೇಶದ ಸೈನಿಕರ ಭದ್ರತೆಗೆ ಸರಿಯಾದ ಪ್ರತಿಕಾರದ ಅಗತ್ಯ ಇದೆ ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಮಾತನಾಡಿ ನಮ್ಮ ದೇಶದ 20 ಯೋಧರ ಬಲಿದಾನ ಯಾವುದೇ ಕಾರಣಕ್ಕೂ ವ್ಯರ್ಥವಾಗಲು ನಮ್ಮ ದೇಶ ಬಿಡಬಾರದು ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ವೆರೋನಿಕಾ ಕರ್ನೆಲಿಯೊ, ಜನಾರ್ದನ್ ಭಂಡಾರ್ ಕರ್, ಭುಜಂಗ ಶೆಟ್ಟಿ, ಮೈರ್ಮಾಡಿ ಅಶೋಕ್ ಶೆಟ್ಟಿ, ಡಾ ಸುನೀತಾ ಶೆಟ್ಟಿ, ಗೋಪಿ ನಾಯಕ್, ಹರೀಶ್ ಶೆಟ್ಟಿ ಕೀಳಂಜೆ, ರಾಜೇಶ್ ಶೆಟ್ಟಿ, ನಿತ್ಯಾನಂದ ಕೆಮ್ಮಣ್ಣು, ರೆಹಮತುಲ್ಲಾ, ಸೂರ್ಯ ಸಾಲಿಯಾನ್, ರಘುರಾಂ ಶೆಟ್ಟಿ, ರಾಘವೇಂದ್ರ ಶೆಟ್ಟಿ, ರಾಘವೇಂದ್ರ ಶೆಟ್ಟಿ, ವಿಶಾಖ ಶೆಟ್ಟಿ, ಉಪೇಂದ್ರ ಗಾಣಿಗ, ಕೃಷ್ಣಪ್ಪ ಪೂಜಾರಿ, ಫ್ರಾಂಕಿ ಡಿಸೋಜಾ, ಸರಸ್ವತಿ ನಾಯಕ್, ಶ್ರೀನಿವಾಸ ಗುಲ್ವಾಡಿ, ಪ್ರಶಾಂತ್ ಸುವರ್ಣ, ಮೆಲ್ವಿನ್, ಸತೀಶ್, ನಿತ್ಯಾನಂದ ಬಿ ಆರ್ ಉಮೇಶ್ ಶೆಟ್ಟಿ, ರಮೇಶ್ ಕರ್ಕೆರಾ, ಅಲ್ತಾಫ್ ಉಪಸ್ಥಿತರಿದ್ದರು.


Spread the love