Home Mangalorean News Kannada News ಭಾನುವಾರ ಸಂಪೂರ್ಣ ಲಾಕ್ ಡೌನ್ – ಅನಾವಶ್ಯಕ ತಿರುಗಾಡಿದರೆ ನಾವು ಮಾತಾಡಲ್ಲ ಲಾಠಿ ಮಾತಾಡುತ್ತೆ –...

ಭಾನುವಾರ ಸಂಪೂರ್ಣ ಲಾಕ್ ಡೌನ್ – ಅನಾವಶ್ಯಕ ತಿರುಗಾಡಿದರೆ ನಾವು ಮಾತಾಡಲ್ಲ ಲಾಠಿ ಮಾತಾಡುತ್ತೆ – ಡಿಸಿ ಜಗದೀಶ್

Spread the love

ಭಾನುವಾರ ಸಂಪೂರ್ಣ ಲಾಕ್ ಡೌನ್ – ಅನಾವಶ್ಯಕ ತಿರುಗಾಡಿದರೆ ನಾವು ಮಾತಾಡಲ್ಲ ಲಾಠಿ ಮಾತಾಡುತ್ತೆ – ಡಿಸಿ ಜಗದೀಶ್

ಉಡುಪಿ: ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯ ತನಕ ರಾಜ್ಯ ಸರಕಾರ ಆದೇಶದಂತೆ ಸಂಪೂರ್ಣ ಲಾಕ್ ಡೌನ್ ಇದ್ದು ಈ ವೇಳೆ ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡಿದರೆ ನಾವು ಮಾತನಾಡಲ್ಲ ಬದಲಾಗಿ ಲಾಠಿ ಮಾತನಾಡಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ಅವಧಿಯಲ್ಲಿ ಅಗತ್ಯ ವಸ್ತುಗಳಾದ ಪತ್ರಿಕೆ, ಹಾಲು, ಔಷಧ ಪೂರೈಕೆ/ಖರೀದಿಗೆ ಯಾವುದೇ ನಿರ್ಬಂಧವಿರುವುದಿಲ್ಲ. ಆದರೆ ಇತರ ಎಲ್ಲಾ ಅಂಗಡಿ ಮುಂಗಟ್ಟುಗಳು, ಹೊಟೇಲ್ಗಳು ಮುಚ್ಚಲ್ಪಡಲಿದೆ. ಅಲ್ಲದೆ ಎಲ್ಲಾ ಖಾಸಗಿ ಹಾಗೂ ಸಾರ್ವಜನಿಕ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದರು.


Spread the love

Exit mobile version