ಭಾರೀ ಮಳೆ: ಶನಿವಾರ (ಮೇ 31) ದ.ಕ. ಜಿಲ್ಲೆಯ ಅಂಗನವಾಡಿ ಕೇಂದ್ರ, ಶಾಲೆಗಳಿಗೆ ರಜೆ

Spread the love

ಭಾರೀ ಮಳೆ: ಶನಿವಾರ (ಮೇ 31) ದ.ಕ. ಜಿಲ್ಲೆಯ ಅಂಗನವಾಡಿ ಕೇಂದ್ರ, ಶಾಲೆಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಶನಿವಾರ (ಮೇ 31) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆ ಇರುತ್ತದೆ. ದಿನಾಂಕ: 21.05.2015 ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ದೇಹಣಾ ಪ್ರಾಧಿಕಾರವು ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

> ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, (ಸಿಬಿಎಸ್ ಇ, ಐಸಿಎಸ್ ಇ ಸೇರಿದಂತೆ), ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 11.05.2015 ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

> ನೀರು ಇರುವ ತಗ್ಗು ಪ್ರದೇಶ, ಕೆರೆ ಏರಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತ

> ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

> ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ ಸಮುದ್ರತೀರಕ್ಕೆ, ಚಾರಣಕ್ಕೆ ತೆರಳದಂತೆ ಸೂಚಿಸಲಾಗಿದೆ.

> ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು

ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 1077 ಅಥವಾ 0824 2442590


Spread the love
Subscribe
Notify of

0 Comments
Inline Feedbacks
View all comments