ಮಂಗಳವಾರದಿಂದ ದಕ ಜಿಲ್ಲೆ ಲಾಕ್ ಡೌನ್ ಕುರಿತು ತಾನು ಯಾವುದೇ ಆದೇಶ ನೀಡಿಲ್ಲ – ಸಚಿವ ಕೋಟ

Spread the love

ಮಂಗಳವಾರದಿಂದ ದಕ ಜಿಲ್ಲೆ ಲಾಕ್ ಡೌನ್ ಕುರಿತು ತಾನು ಯಾವುದೇ ಆದೇಶ ನೀಡಿಲ್ಲ – ಸಚಿವ ಕೋಟ

ಮಂಗಳೂರು: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಮಂಗಳವಾರದಿಂದ ದಕ ಜಿಲ್ಲೆಯನ್ನು ಸಂಪೂರ್ಣ ಲಾಕ್ ಡೌನ್ ಮಾಡುವ ಕುರಿತು ತಾನು ಯಾವುದೇ ಆದೇಶ ನೀಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ಕೆಲವೊಂದು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದಕ ಜಿಲ್ಲೆಯಲ್ಲಿ ಮಂಗಳವಾರದಿಂದ ಲಾಕ್ ಡೌನ್ ಹಾಕಲಾಗಿದೆ ಎಂಬ ಮಾಹಿತಿ ಬಂದ ಹಿನ್ನಲೆಯಲ್ಲಿ ಖಾಸಗಿ ವಾಹಿನಿಯೊಂದಕ್ಕೆ ಸ್ಪಷ್ಟನೆ ನೀಡಿರುವ ಸಚಿವರು ಈ ವರೆಗೆ ಅಂತಹ ಯಾವುದೇ ನಿರ್ಧಾರ ಮಾಡಿಲ್ಲ. ಸೋಮವಾರ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದು ಈ ವೇಳೆ ಜಿಲ್ಲೆಯ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳಿಗೆ ಮನದಟ್ಟು ಮಾಡಲಾಗುವುದು ಅಲ್ಲಿಯ ತನಕ ಯಾವುದೇ ಲಾಕ್ ಡೌನ್ ಮಾಡಲಾಗುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.


Spread the love