ಮಂಗಳೂರಿಗೆ ರಾಷ್ಟ್ರಪತಿ ಆಗಮನ: ಸ್ವಾಗತ

Spread the love

ಮಂಗಳೂರಿಗೆ ರಾಷ್ಟ್ರಪತಿ ಆಗಮನ: ಸ್ವಾಗತ

ಮ0ಗಳೂರು ಜೂನ್ 18 ಕರ್ನಾಟಕ ವಾರ್ತೆ:- ಭಾರತದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಉಡುಪಿಗೆ ತೆರಳಲು ಭಾನುವಾರ ಮಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸಿದಾಗ ಭವ್ಯವಾಗಿ ಸ್ವಾಗತಿಸಲಾಯಿತು.

ಭಾನುವಾರ ಬೆಳಿಗ್ಗೆ ಭಾರತೀಯ ವಾಯುಪಡೆಯ ವಿಮಾನದಲ್ಲಿ ಆಗಮಿಸಿದ ರಾಷ್ಟ್ರಪತಿಯವರನ್ನು ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. ಆಹಾರ ಸಚಿವ ಯು.ಟಿ.ಖಾದರ್, ಮೇಯರ್ ಕವಿತಾ ಸನಿಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್, ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್ ಅವರು ಈ ಸಂದರ್ಭದಲ್ಲಿದ್ದು, ರಾಷ್ಟ್ರಪತಿಗಳಿಗೆ ಸ್ವಾಗತ ನೀಡಿದರು.

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರು ರಾಷ್ಟ್ರಪತಿಗಳೊಂದಿಗೆ ವಿಮಾನದಲ್ಲಿ ಆಗಮಿಸಿದರು.

ರಾಷ್ಟ್ರಪತಿಗಳು ಬಳಿಕ ವಾಯುಪಡೆ ಹೆಲಿಕಾಪ್ಟರ್‍ನಲ್ಲಿ ಉಡುಪಿಗೆ ತೆರಳಿದರು. ರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ವಿಮಾನನಿಲ್ದಾಣದ ಸುತ್ತಮುತ್ತ ಹಾಗೂ ಮಂಗಳೂರಿನಿಂದ ವಿಮಾನನಿಲ್ದಾಣಕ್ಕೆ ತೆರಳುವ ರಸ್ತೆಯುದ್ದಕ್ಕೂ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.


Spread the love