ಮಂಗಳೂರಿನಿಂದ ಉಡುಪಿಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯ ವಶ

Spread the love

ಮಂಗಳೂರಿನಿಂದ ಉಡುಪಿಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯ ವಶ

ಮಂಗಳೂರು: ಮಂಗಳೂರಿನಿಂದ ಉಡುಪಿಗೆ ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಲಾರಿ ಸಮೇತ ಮರಳನ್ನು ಪೋಲಿಸರು ವಶಪಡಿಸಿಕೊಂಡ ಘಟನೆ ಬುಧವಾರ ನಡೆದಿದೆ.

ಬುಧವಾರ ಮುಂಜಾನೆ ಸಮಯ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿ.ಎಸ್.ಐ ರವರು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿರುವ ವೇಳೆ ವಿವಿಧ ಕಡೆಗಳಲ್ಲಿ ವಾಹನ ತಪಾಸಣೆ ಮಾಡುತ್ತಿರುವ ಸಮಯ ಬಿ.ಸಿ. ರೋಡ್ ಕಡೆಯಿಂದ ಪಡೀಲ್ ಮಾರ್ಗವಾಗಿ ಉಡುಪಿ ಜಿಲ್ಲೆಯ ಕಡೆಗೆ ಹೋಗುತ್ತಿದ್ದ ಶೇಖರ್ ಎಂಬವರು ಮಾಲಕತ್ವದ & ಮಧು ಯವರು ಚಾಲಕರಾಗಿರುವ KA-52-9714 ನೇ ಲಾರಿಯಲ್ಲಿ ಮರಳನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಅಂತರ್ ಜಿಲ್ಲೆಯಾದ ಉಡುಪಿಗೆ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ, ಮುಂದಿನ ಸೂಕ್ತ ಕಾನೂನು ಕ್ರಮಕ್ಕಾಗಿ ಉಪ ನಿರ್ದೇಶಕರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಂಗಳೂರು ರವರಿಗೆ ಹಸ್ತಾಂತರಿಸಲಾಗಿದೆ. ಸ್ವಾಧೀನ ಪಡಿಸಿಕೊಂಡ ಮರಳು ಮತ್ತು ಲಾರಿಯ ಅಂದಾಜು ಮೌಲ್ಯ ಒಟ್ಟು ರೂ. 10.50,000/- ಆಗಬಹುದು.

ಕಾರ್ಯಾಚರಣೆಯನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ (ಐ.ಪಿ.ಎಸ್.), ಉಪ ಪೊಲೀಸ್ ಆಯುಕ್ತರಾದ ಹನುಮಂತರಾಯ (ಐ.ಪಿ.ಎಸ್.) ಮತ್ತು ಉಮಾ ಪ್ರಶಾಂತ್ ಹಾಗೂ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ರಾಮರಾವ್ ರವರ ಮಾರ್ಗದರ್ಶನದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣಾ ನಿರೀಕ್ಷಕರಾದ ಜಗದೀಶ್ ರವರ ನೇತೃತ್ವದದಲ್ಲಿ ಉಪ ನಿರೀಕ್ಷಕರಾದ ಪ್ರದೀಪ್ ಟಿ. ಆರ್. ಮತ್ತು ಠಾಣಾ ಸಿಬ್ಬಂದಿಗಳು ಪತ್ತೆ ಕಾರ್ಯ ನಡೆಸಿರುವುದಾಗಿದೆ….


Spread the love