ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ: ಸ್ಥಳದಲ್ಲೇ ಪಡಿತರ ಚೀಟಿ ವಿತರಣಾ ಅಭಿಯಾನ

Spread the love

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ: ಸ್ಥಳದಲ್ಲೇ ಪಡಿತರ ಚೀಟಿ ವಿತರಣಾ ಅಭಿಯಾನ

ಮಂಗಳೂರು : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಬಿಪಿಎಲ್ ಪಡಿತರ ಚೀಟಿ ಅರ್ಜಿದಾರರಿಗೆ ಸ್ಥಳದಲ್ಲೇ ಪಡಿತರ ಚೀಟಿ ವಿತರಣಾ ಅಭಿಯಾನ ಅಯೋಜಿಸಲಾಗಿದೆ.

ಫೆಬ್ರವರಿ 28 ಮತ್ತು ಮಾರ್ಚ್ 1 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ಮಹಾನಗರ ಪಾಲಿಕೆ ಕಚೇರಿ, ಸುರತ್ಕಲ್, ಮಾರ್ಚ್ 3 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘ, ಮಾರ್ಚ್ 6 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ನೀರುಮಾರ್ಗ ಗ್ರಾಮ ಪಂಚಾಯತ್ ಕಚೇರಿ, ಮಾರ್ಚ್ 7 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ಗಂಜಿಮಠ ಗ್ರಾಮ ಪಂಚಾಯತ್ ಕಚೇರಿ, ಮಾರ್ಚ್ 8 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ಎಡಪದವು ಗ್ರಾಮ ಪಂಚಾಯತ್ ಕಚೇರಿನಲ್ಲಿ ಪಡಿತರ ಚೀಟಿ ವಿತರಣಾ ಅಭಿಯಾನ ನಡೆಯಲಿದೆ.

ಅರ್ಜಿದಾರರು ತರಬೇಕಾದ ಅಗತ್ಯ ದಾಖಲೆಗಳು ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ ಸ್ವೀಕೃತಿ ಪತ್ರದ ಪ್ರತಿ , ಕುಟುಂಬದ ಆದಾಯ ಪ್ರಮಾಣ ಪತ್ರದ ಪ್ರತಿ( ಅವಧಿ ಮೀರಿರಬಾರದು ಹಾಗೂ 18 ವಯಸ್ಸಿಗಿಂತ ಮೇಲ್ಪಟ್ಟ ಸದಸ್ಯರ ಹೆಸರಿನಲ್ಲಿರಬೇಕು), ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್‍ನ ನಕಲು ಪ್ರತಿಗಳನ್ನು ಹಾಜರುಪಡಿಸಬೇಕು. ಕುಟುಂಬದ ಯಜಮಾನ ಅಥವಾ ಅರ್ಜಿಯಲ್ಲಿ ಹೆಸರಿರುವ ಒಬ್ಬ ಪೌಢ ಸದಸ್ಯರು ಖುದ್ದಾಗಿ ಹಾಜರಿದ್ದು ಬೆರಳಚ್ಚು ಹೊಂದಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಬಿ.ಎ. ಮೊಹಿಯುದ್ದೀನ್ ಬಾವ ಇವರ ಕಚೇರಿ ಸಂಖ್ಯೆ 0284-2220304, 8050132455 ನ್ನು ಸಂಪರ್ಕಿಸಲು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.


Spread the love