ಮಂಗಳೂರು ಚಲೋ: ಶುಕ್ರವಾರ ಮಧ್ಯರಾತ್ರಿ ವರೆಗೂ ನಿಷೇಧಾಜ್ಞೆ ಜಾರಿ

Spread the love

ಮಂಗಳೂರು ಚಲೋ: ಶುಕ್ರವಾರ ಮಧ್ಯರಾತ್ರಿ ವರೆಗೂ ನಿಷೇಧಾಜ್ಞೆ ಜಾರಿ

ಮಂಗಳೂರು: ಸಂಘ– ಪರಿವಾರದವರ ಹತ್ಯೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ರಾಜ್ಯದ ವಿವಿಧ ಕಡೆಗಳಿಂದ ಹಮ್ಮಿಕೊಂಡಿರುವ ‘ಮಂಗಳೂರು ಚಲೋ’ ಬೈಕ್ ರ‍್ಯಾಲಿಗೆ ಅನುಮತಿ ನಿರಾಕರಣೆ ನಡುವೆ ಕಾರ್ಯಕ್ರಮ ನಡೆಸಲು ಬಿಜೆಪಿ ಸಿದ್ಧತೆ ಮಾಡುತ್ತಿರುವಾಗಲೇ ಮಂಗಳೂರು ಪೊಲೀಸ್ ಕಮಿಷನರ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಬುಧವಾರ ಸಂಜೆ 6 ಗಂಟೆಯಿಂದ ಶುಕ್ರವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕರ್ನಾಟಕ ಪೊಲೀಸ್ ಕಾಯ್ದೆಯಡಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ಸಭೆಗೆ ಮಾತ್ರ ಅನುಮತಿ ನೀಡಲಾಗಿದ್ದು, ಬೈಕ್ ರ‍್ಯಾಲಿ, ಪಾದಯಾತ್ರೆ, ಜಾಥಾ ನಡೆಸಲು ನಿಷೇಧವಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಮಂಗಳೂರಿಗೆ ಬಂದಿದ್ದಾರೆ.


Spread the love