ಮಂಗಳೂರು: ಧಾರಾಕಾರ ಮಳೆಗೆ ಬೃಹತ್ ಮರ ಧರೆಗುರುಳಿ ಮನೆಗೆ ಹಾನಿ
ಮಂಗಳೂರು: ನಗರದಲ್ಲಿ ತಡರಾತ್ರಿ ಗುಡುಗು-ಸಿಡಿಲು ಸಮೇತ ಸುರಿದ ಭಾರೀ ಮಳೆಯಿಂದಾಗಿ ಬೃಹತ್ ವೃಕ್ಷವೊಂದು ಧರೆಗುರುಳಿ ಮನೆಗೆ ಹಾನಿ ಉಂಟಾದ ಘಟನೆ ನಡೆದಿದೆ.
ಮಂಗಳೂರಿನ ಬಸವನಗುಡಿ ಮಠದ ಸಮೀಪ ಈ ಘಟನೆ ಸಂಭವಿಸಿದ್ದು, ವರದರಾಜ್ ಶೇಟ್ ಅವರಿಗೆ ಸೇರಿದ ಹೆಂಚಿನ ಮನೆ ಮೇಲೆ ಮರದ ದೊಡ್ಡ ಭಾಗ ಬಿದ್ದ ಪರಿಣಾಮ ಮನೆಗೆ ಭಾಗಶಃ ಹಾನಿಯಾಗಿದೆ.
ಘಟನೆಯ ವೇಳೆ ಮನೆಯೊಳಗೆ 4 ತಿಂಗಳ ಮಗು ಹಾಗೂ 80 ವರ್ಷದ ಇಬ್ಬರು ವೃದ್ಧರು ಸೇರಿ ಐದಾರು ಮಂದಿ ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಸ್ಥಳೀಯರು ಹಾಗೂ ಸಂಬಂಧಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.
