ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಡಾ.ಪಿ.ಎಸ್.ಹರ್ಷ ನೇಮಕ

Spread the love

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಡಾ.ಪಿ.ಎಸ್.ಹರ್ಷ ನೇಮಕ

ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಡಾ. ಹರ್ಷ ಪಿ.ಎಸ್. ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಕಮಿಷನರ್ ಆಗಿದ್ದ ಸಂದೀಪ್ ಪಾಟೀಲ್ ಅವರನ್ನು ಬೆಂಗಳೂರು ಅಪರಾಧ ವಿಭಾಗದ ಜಂಟಿ ಆಯುಕ್ತರಾಗಿ ವರ್ಗ ಮಾಡಿ ಡಾ. ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೇಮಿಸಿತ್ತು. ಆದರೆ ಸೋಮವಾರ ಹೊರಡಿಸಿದ ಹೊಸ ಆದೇಶದಲ್ಲಿ ಡಾ. ಹರ್ಷ ಅವರನ್ನು ಆಯುಕ್ತರನ್ನಾಗಿ ನೇಮಕಗೊಳಿಸಿದೆ.

2004ರ ಐಪಿಎಸ್ ಬ್ಯಾಚ್‌ನವರಾಗಿರುವ ಇವರು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ ನಿರ್ದೇಶಕರಾಗಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಯುಕ್ತರಾಗಿ, ಕಾರಾಗೃಹ ಇಲಾಖೆ ಡಿಐಜಿ, ಕೆಎಸ್ಸಾರ್ಟಿಸಿಯ ನಿರ್ದೇಶಕ (ವಿಜಿಲೆನ್ಸ್ ಮತ್ತು ಸೆಕ್ಯೂರಿಟಿ) ಮುಂತಾದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.


Spread the love