ಮಂಗಳೂರು: ಪರಿಶಿಷ್ಟ ಪಂಗಡಗಳ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಮಂಗಳೂರು: 2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ ಯೋಜನೆಗಳಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಅರ್ಜಿ ಆಹ್ವಾನಿಸಲಾಗಿದೆ.
1.ಸ್ವಯಂ ಉದ್ಯೋಗ ನೇರಸಾಲ ಯೋಜನೆಗಳು
ನೇರ ಸಾಲ ಯೋಜನೆ:- ಕಿರು ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ನಿಗಮದಿಂದ ಸಹಾಯಧನ ಮತ್ತು ನೇರಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ ರೂ.1 ಲಕ್ಷ ಇದರಲ್ಲಿ ಸಹಾಯಧನ ರೂ.50,000 ಹಾಗೂ ಸಾಲ ರೂ. 50,000 (ಶೇಕಡ 4 ರಷ್ಟು ಬಡ್ಡಿದರ).
2.ಉದ್ಯಮಶೀಲತಾ ಅಭಿವೃದ್ಧಿ ಯೋಜನೆ :(ಬ್ಯಾಂಕ್ ಗಳ ಸಹಯೋಗದೊಂದಿಗೆ)
I ಸ್ವಾವಲಂಬಿ ಸಾರಥಿ:- ಸರಕು ವಾಹನ /ಟ್ಯಾಕ್ಸಿ (ಹಳದಿ ಬೋರ್ಡ್)ಉದ್ದೇಶದಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ.
II.ಹೈನುಗಾರಿಕೆ:- ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ ಶೇ 50ರಷ್ಟು ಅಥವಾ ಗರಿಷ್ಟ 1.25 ಲಕ್ಷಗಳ ಸಹಾಯಧನ
III. ಇತರೆ ಉದ್ದೇಶ:- ವ್ಯಾಪಾರ ಮತ್ತು ಇತರೆ ಉದ್ದೇಶಗಳಿಗೆ ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ ರೂ. 2.00ಲಕ್ಷಗಳ ಸಹಾಯಧನ
3. ಮೈಕ್ರೋ ಕ್ರೆಡಿಟ್(ಪ್ರೇರಣಾ) ಯೋಜನೆ:
ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಟ 10 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ ರೂ. 5.00ಲಕ್ಷ ಇದರಲ್ಲಿ ಸಹಾಯಧನ ರೂ.2.50 ಲಕ್ಷ ಹಾಗೂ ಸಾಲ ರೂ.2.50 ಲಕ್ಷ (ಶೇಕಡ 4ರಷ್ಟು ಬಡ್ಡಿದರ)
4.ಭೂ ಒಡೆತನ ಯೋಜನೆ :
ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ನೀಡಲಾಗುವುದು. ಘಟಕ ವೆಚ್ಚ ರೂ.25.00 ಲಕ್ಷ / ರೂ. 20 ಲಕ್ಷ ಸಹಾಯಧನ ಶೇ.50% ಹಾಗೂ ಸಾಲ ಶೇ.50% (ಶೇಕಡ 4ರಷ್ಟು ಬಡ್ಡಿದರ)
5.ಗಂಗಾ ಕಲ್ಯಾಣ ಯೋಜನೆ :
1.20 ಎಕರೆಯಿಂದ 5.00 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು. ಘಟಕ ವೆಚ್ಚ ರೂ.4.75 ಲಕ್ಷ/ ರೂ.3.75 ಲಕ್ಷ–ಇದರಲಿ ್ಲರೂ.50,000/- ಸಾಲವೂ ಸೇರಿರುತ್ತದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನ. ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ವೆಬ್ಸೈಟ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ನೇರವಾಗಿ ಅಥವಾ ಹತ್ತಿರದ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ನಿಗಮಗಳ ವೆಬ್ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ 9482300400 ಸಂಪರ್ಕಿಸಬಹುದು ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.