ಮಂಗಳೂರು: ಪ್ರಗತಿ ಹಿನ್ನಡೆಯ ಸಂಕೇತ- ಕೆ ಹರೀಶ್ ಕುಮಾರ್

Spread the love

ಮಂಗಳೂರು: ಪ್ರಗತಿ ಹಿನ್ನಡೆಯ ಸಂಕೇತ- ಕೆ ಹರೀಶ್ ಕುಮಾರ್

ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ ಬೇರೇನು ಮಂಡಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಶಾಸಕರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಕಾರ್ಪೊರೇಟ್ ಸಂಸ್ಥೆಗಳ ಅಡಿಯಾಳಾಗಿರುವ ಕೇಂದ್ರ ಸರಕಾರ ಈ ಬಜೆಟ್‌ನಲ್ಲಿ ಬಡವರು, ಮಧ್ಯಮ ವರ್ಗಕ್ಕೆ ಯಾವುದೇ ಯೋಜನೆ ಘೋಷಿಸಿಲ್ಲ. ಈ ದೇಶದಲ್ಲಿ ಅತೀ ದೊಡ್ಡ ಸಂಖ್ಯೆಯಲ್ಲಿರುವ ಆದಾಯ ತೆರಿಗೆದಾರರಿಗೆ ಹೇಳುವಂತಹ ಯಾವುದೇ ಘೋಷಣೆಯಿಲ್ಲ. ನಿಜಕ್ಕೂ ನಿರಾಶದಾಯಕ ಬಜೆಟ್ ಇದಾಗಿದ್ದು, ಮುಂದೆ ಆಡಳಿತಕ್ಕೆ ಬರುವ ವಿಶ್ವಾಸ ಬಿಜೆಪಿಯವರಿಗಿಲ್ಲ ಎಂದು ಕೆ ಹರೀಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


Spread the love