ಮಂಗಳೂರು: ಬಿಜೆಪಿ ಕಾರ್ಯಕರ್ತರಿಂದ ಸಿಎಂ ಗೆ ಕಪ್ಪು ಬಾವುಟ ಪ್ರದರ್ಶನ, ಬಂಧನ

Spread the love

ಮಂಗಳೂರು: ಬಿಜೆಪಿ ಕಾರ್ಯಕರ್ತರಿಂದ ಸಿಎಂ ಗೆ ಕಪ್ಪು ಬಾವುಟ ಪ್ರದರ್ಶನ, ಬಂಧನ

ಮಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಉತ್ತರ ಮಂಡಲ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ ಮಾಡಿದ ಘಟನೆ ನಡೆಯಿತು.

ರೌಡಿ ಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಲ್ಲಿ ಪಿ ಎಫ್ ಐ ಸಂಘಟನೆ ಕೈವಾಡದ ಶಂಕೆ ಇದ್ದು ಘಟನೆಯನ್ನು ಎನ್ ಐ ಎ ತನಿಖೆಗೆ ನೀಡುವಂತೆ ಹಾಗೂ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರಕಾರದಿಂದ ಪರಿಹಾರ ನೀಡುವಂತೆ ಆಗ್ರಹಿಸಿ ಕಪ್ಪು ಬಾವುಟ ಪ್ರದರ್ಶನ ನಡೆಯಿತು.
ಈ ವೇಳೆ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.


Spread the love
Subscribe
Notify of

0 Comments
Inline Feedbacks
View all comments