ಮಂಗಳೂರು | ಹುಬ್ಬಳ್ಳಿ-ಧಾರವಾಡ ಲವ್ ಜಿಹಾದ್ ಪ್ರಕರಣ: SIT ತನಿಖೆಗೆ ಆಗ್ರಹ
ಮಂಗಳೂರು: ಹುಬ್ಬಳ್ಳಿ-ಧಾರವಾಡ ಜಿಮ್ನಲ್ಲಿ ನಡೆದ ಲವ್ ಜಿಹಾದ್ ಪ್ರಕರಣವನ್ನು ವಿರೋಧಿಸಿ ವಿಹೆಚ್ಪಿ ಹಾಗೂ ಭಜರಂಗದಳ ಮಂಗಳೂರು ಘಟಕ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ಈ ಕುರಿತು ಮಾತನಾಡಿದ ವಿಹೆಚ್ಪಿ ಮುಖಂಡ ಪ್ರದೀಪ್ ಸರಿಪಳ್ಳ, ಇಂತಹ ಘಟನೆಗಳ ಬಗ್ಗೆ ಮುಂಚೆಯೇ ಎಚ್ಚರಿಕೆ ನೀಡಿದ್ದರೂ ಯಾರೂ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದರು. ಮಂಗಳೂರು ಸುರತ್ಕಲ್ ಪ್ರದೇಶದಲ್ಲೂ ಇದೇ ರೀತಿಯ ಘಟನೆ ನಡೆದಿರುವುದನ್ನು ಅವರು ಉಲ್ಲೇಖಿಸಿದರು.
ಎಲ್ಲಾ ಇಂತಹ ಪ್ರಕರಣಗಳನ್ನು ವಿಶೇಷ ತನಿಖಾ ತಂಡ (SIT)ಗೆ ಒಪ್ಪಿಸಬೇಕು ಎಂದು ಅವರು ಆಗ್ರಹಿಸಿದರು.
ಮಂಗಳೂರಿನಲ್ಲೂ ಅನೇಕ ಜಿಮ್ಗಳಲ್ಲಿ ಮುಸ್ಲಿಂ ಟ್ರೈನರ್ಗಳು ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಯುವತಿಯರು ಹಾಗೂ ಪೋಷಕರು ಎಚ್ಚರಿಕೆಯಿಂದಿರಬೇಕು. ಜಿಮ್ಗೆ ಕಳುಹಿಸುವ ಮೊದಲು ಸಮರ್ಪಕವಾಗಿ ಪರಿಶೀಲನೆ ನಡೆಸಬೇಕು ಎಂದು ಸಲಹೆ ನೀಡಿದರು.
