Home Mangalorean News Kannada News ಮಂಜೇಶ್ವರ  ಚರ್ಚ್ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ, ಕಿಟಕಿ ಗಾಜಿಗೆ ಹಾನಿ

ಮಂಜೇಶ್ವರ  ಚರ್ಚ್ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ, ಕಿಟಕಿ ಗಾಜಿಗೆ ಹಾನಿ

Spread the love

ಮಂಜೇಶ್ವರ  ಚರ್ಚ್ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ, ಕಿಟಕಿ ಗಾಜಿಗೆ ಹಾನಿ

ಮಂಜೇಶ್ವರ: ಇಲ್ಲಿನ ಅವರ್ ಲೇಡಿ ಆಫ್ ಮರ್ಸಿ ಚರ್ಚ್‌ಗೆ ದುಷ್ಕರ್ಮಿಗಳು ಕಲ್ಲೆಸೆದ ಘಟನೆ ರವಿವಾರ ರಾತ್ರಿ ನಡೆದಿದ್ದು, ಕೃತ್ಯ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಚರ್ಚಿನ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ.

ಕೃತ್ಯದ ದೃಶ್ಯಾವಳಿಗಳು ಚರ್ಚಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳ ಪೈಕಿ ಓರ್ವ ಕಲ್ಲುಗಳೊಂದಿಗೆ ಚರ್ಚ್ ಆವರಣವನ್ನು ಪ್ರವೇಶಿಸಿ ಕಲ್ಲು ತೂರಾಟ ನಡೆಸಿದ್ದಾನೆ. ಇದರಿಂದ ಚರ್ಚಿನ ಮುಂಭಾಗದ ಎರಡು ಕಿಟಕಿಗಳ ಗಾಜುಗಳಿಗೆ ಹಾನಿಯಾಗಿದೆ. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಹೆಲ್ಮೆಟ್‌ಧಾರಿಗಳಾಗಿದ್ದರು.

ಈ ನಡುವೆ ಚರ್ಚಿಗೆ ಕಲ್ಲು ತೂರಾಟ ನಡೆದಿರುವ ಹಿನ್ನೆಲೆಯಲ್ಲಿ ಕ್ರೈಸ್ತ ಬಾಂಧವರು ಚರ್ಚ್ ಆವರಣದಲ್ಲಿ ಜಮಾಯಿಸಿದ್ದಾರೆ.

ಘಟನೆ ಸ್ಥಳಕ್ಕೆ ಆಗಮಿಸಿರುವ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.


Spread the love

Exit mobile version