ಮಟ್ಕಾ ದಂಧೆ : ಪೋಲಿಸರಿಂದ 6 ಮಂದಿಯ ಸೆರೆ

Spread the love

ಮಟ್ಕಾ ದಂಧೆ : ಪೋಲಿಸರಿಂದ 6 ಮಂದಿಯ ಸೆರೆ

ಮಂಗಳೂರು: ನಗರದ ಸರ್ವಿಸ್ ಬಸ್  ನಿಲ್ದಾಣ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಸುತ್ತಿದ್ದ 6 ಮಂದಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತರನ್ನು ಬಜಾಲ್ ನಿವಾಸಿ ರಾಕೇಶ್ ಪೂಜಾರಿ (32), ಸ್ಟೇಟ್ ಬ್ಯಾಂಕ್ ನಿವಾಸಿ ದಯಾನಂದ (44), ಗೋರಿಗುಡ್ಡೆ ನಿವಾಸಿ ಅಶೋಕ್ (44), ಉಜ್ಜೋಡಿ ನಿವಾಸಿ ನಂದನ್ ಸಾಲ್ಯಾನ್ (28), ಅಡ್ಡೂರು ನಿವಾಸಿ ಇಮ್ತಿಯಾಜ್ ಅಹಮ್ಮದ್ (44) ಎಂದು ಗುರುತಿಸಲಾಗಿದೆ.

ನವೆಂಬರ್ 1 ರಂದು ಸಂಜೆ ಸಮಯ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಸರ್ವಿಸ್ ಬಸ್ ನಿಲ್ದಾಣ ಬಳಿಯ ಒಣಮೀನು ಮಾರುಕಟ್ಟೆಯ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆಯನ್ನು ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಟ್ಕಾ ದಂಧೆಯಲ್ಲಿ ನಿರತರಾಗಿದ್ದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಅವರಿಂದ  ಮಟ್ಕಾ ಆಟಕ್ಕೆ ಬಳಸಿದ ರೂ. 17,970/-ನಗದು, ಮಟ್ಕಾ ನಂಬ್ರ ಬರೆದ ಚೀಟಿಗಳು, 7 ಮೊಬೈಲ್ ಫೋನ್ ಗಳು  ಹಾಗೂ ಒಂದು ಹೊಂಡಾ ಅಕ್ಟಿವಾ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ. 56,770 ಆಗಿರುತ್ತದೆ.  ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

ಪೊಲೀಸ್ ಕಮೀಷನರ್ ಟಿ. ಆರ್ ಸುರೇಶ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ  ಹನುಮಂತರಾಯ ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಯವರಾದ   ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯಲ್ಲಿ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಗಳು  ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.


Spread the love