ಮಡಿಕೇರಿಯ ಮರಗೋಡಿನಲ್ಲಿ ಗುಂಡಿಕ್ಕಿ ಬಿಜೆಪಿ ನಾಯಕನ ಕೊಲೆ

Spread the love

ಮಡಿಕೇರಿಯ ಮರಗೋಡಿನಲ್ಲಿ ಗುಂಡಿಕ್ಕಿ ಬಿಜೆಪಿ ನಾಯಕನ ಕೊಲೆ

ಮಡಿಕೇರಿ: ಸ್ಥಳೀಯ ಮರಗೋಡು ಬಿಜೆಪಿ ಸ್ಥಾನೀಯ ಸಮಿತಿ ಕಾರ್ಯದರ್ಶಿಯೊಬ್ಬರನ್ನು ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮರಗೋಡು ಬಿಜೆಪಿ ಸ್ಥಾನೀಯ ಸಮಿತಿ ಕಾರ್ಯದರ್ಶಿ ಕಾನಡ್ಕ ತಿಲಕರಾಜ್ (40) ಎಂದು ಗುರುತಿಸಲಾಗಿದ್ದು, ಗ್ರಾಪಂ ಸದಸ್ಯ ಮುಂಡೋಡಿ ನಂದಾ ನಾಣಯ್ಯ ಗುಂಡಿಕ್ಕಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯ ಈತ ತಲೆಮರೆಸಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಮೃತರು ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಸೋಮವಾರ ಸಂಜೆ ಮರಗೋಡು ಜಂಕ್ಷನ್ ಬಳಿ ತಿಲಕ್ ರಾಜ್ ಹಾಗೂ ನಂದ ನಾಣಯ್ಯ ನಡುವೆ ವಾಗ್ವಾದ ನಡೆದಿತ್ತು. ಈ ಸಂದರ್ಭ ನಂದಾ ನಾಣಯ್ಯ ತಿಲಕರಾಜ್ ಗೆ ಗುಂಡಿಕ್ಕಿದ್ದ ಎಂದು ಆರೋಪಿಸಲಾಗಿದೆ. ಗುಂಡೇಟಿನಿಂದ ಗಾಯಗೊಂಡ ತಿಲಕರಾಜ್ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಕರೆ ತರುವ ಸಂದರ್ಭ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. .

ರಾಜಕೀಯ ವೈಷಮ್ಯವೇ ಕೃತ್ಯಕ್ಕೆ ಕಾರಣವೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಡಿವೈಎಸ್ಪಿ ಸುಂದರ್ ರಾಜ್, ಗ್ರಾಮಾಂತರ ಠಾಣಾಧಿಕಾರಿ ಚೇತನ್ ಹಾಗೂ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. .


Spread the love