ಮತಾಂಧರನ್ನು ಬಂಧಿಸದಿದ್ದರೆ ಉಗ್ರ ಹೋರಾಟ ಸಂಸದ ನಳಿನ್‍ಕುಮಾರ್ ಕಟೀಲ್ ಎಚ್ಚರಿಕೆ

Spread the love

ಮತಾಂಧರನ್ನು ಬಂಧಿಸದಿದ್ದರೆ ಉಗ್ರ ಹೋರಾಟ ಸಂಸದ ನಳಿನ್‍ಕುಮಾರ್ ಕಟೀಲ್ ಎಚ್ಚರಿಕೆ

ಮಂಗಳೂರು : ಹಿಂದೂಗಳ ಶ್ರದ್ಧಾ ಕೇಂದ್ರವಾದ ಕಟೀಲಿನ ಶ್ರೀ ದುರ್ಗಾ ಪರಮೇಶ್ವರಿ ದೇವಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿರುವುದನ್ನು ಸ್ವಾಭಿಮಾನಿ ಹಿಂದೂಗಳು ಸಹಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿರುವ ಇಂತಹ ಮತಾಂಧರನ್ನು ಪೋಲೀಸರು ತಕ್ಷಣ ಬಂಧಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದೆಂದು ದ.ಕ. ಸಂಸದ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ಹಿಂದೂ ದೇವರನ್ನು ಅಪಮಾನ ಮಾಡುವ ಘಟನೆ ನಿರಂತರ ನಡೆಯುತ್ತಿದೆ.ತುಷ್ಟೀಕರಣದ ರಾಜಕೀಯ ಮಾಡುವ ಕಾಂಗ್ರೆಸ್ ಜನಪ್ರತಿನಿಧಿಗಳು ಪೋಲೀಸ್ ಇಲಾಖೆಯ ಕಾರ್ಯದಲ್ಲಿ ಹಸ್ತಕ್ಷೇಪ ನಡೆಸುವ ಕಾರಣ ಆರೋಪಿಗಳ ಬಂಧನ ನಡೆಯುತ್ತಿಲ್ಲ. ಹಿಂದೂ ಸಂಘಟನೆಗಳ ಯುವಕರನ್ನು ವಿನಾ ಕಾರಣ ಬಂಧಿಸಿ ಕೇಸು ದಾಖಲಿಸುವ ಪೋಲೀಸರು, ಹಿಂದೂಗಳಿಗೆ ಅನ್ಯಾಯವಾದರೆ ಯಾವುದೇ ಕ್ರಮ ವಹಿಸುತ್ತಿಲ್ಲ ಎನ್ನುವ ದೂರು ಸಾರ್ವತ್ರಿಕವಾಗಿದೆ. ಮತಾಂಧರ ರಕ್ಷಣೆಗೆ ನಿಂತಿರುವ ಕಾಂಗ್ರೆಸ್ ನಾಯಕರು ಮತ್ತು ಪೋಲೀಸ್ ಅಧಿಕಾರಿಗಳ ವಿರುದ್ಧ ನಿರ್ಣಾಯಕ ಹೋರಾಟ ನಡೆಸುವುದು ಹಿಂದೂಗಳಿಗೆ ಅನಿವಾರ್ಯವಾಗಲಿದೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

1 Comment

  1. you JUST came to Know that the threaten came from a silly guy who challenging the faith and the god !

Comments are closed.