ಮದುವೆಗೆ ನಿರಾಕರಿಸಿದ್ದಕ್ಕೆ ಅಂಜನಾ ಕೊಲೆ- ತಪ್ಪೊಪ್ಪಿಕೊಂಡ ಆರೋಪಿ ಸಂದೀಪ್ ರಾಥೋಡ್

Spread the love

ಮದುವೆಗೆ ನಿರಾಕರಿಸಿದ್ದಕ್ಕೆ ಅಂಜನಾ ಕೊಲೆ- ತಪ್ಪೊಪ್ಪಿಕೊಂಡ ಆರೋಪಿ ಸಂದೀಪ್ ರಾಥೋಡ್

ಮಂಗಳೂರು: ನಗರದ ಅತ್ತಾವರದಲ್ಲಿ ತರಿಕೆರೆಯ ವಿದ್ಯಾರ್ಥಿನಿ ಅಂಜನಾರನ್ನು ಕೊಲೆಗೈದ ಆರೋಪದ ಮೇಲೆ ಸಿಂಧಗಿಯ ನಿವಾಸಿ ಸಂದೀಪ್ ರಾಥೋಢ್ ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಯ ವೇಳೆ ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.

ಅಂಜನಾ ಪೋಷಕರು ಮನೆಯಲ್ಲಿ ಬೇರೆ ಯುವಕನ ಜೊತೆ ಮದುವೆ ತಯಾರಿ ನಡೆಸಿದ್ದರು. ಹೀಗಾಗಿ ಶುಕ್ರವಾರ ಬೆಳಗ್ಗೆ ಅಂಜನಾಳನ್ನು ಕೊಲೆಗೈದು ಸಂದೀಪ್ ಪರಾರಿಯಾಗಿದ್ದನು. ಕೊಠಡಿಗೆ ಹೊರಗಿನಿಂದ ಬಾಗಿಲು ಹಾಕಿ ಆರೋಪಿ ಪರಾರಿಯಾಗಿದ್ದನು. ನಿನ್ನೆ ಸಂಜೆ ಕಟ್ಟಡದ ಮಾಲೀಕರು ಅನುಮಾನದ ಮೇರೆಗೆ ಕೊಠಡಿಯ ಬಾಗಿಲು ತೆರೆದಾಗ ಕೊಲೆ ಪ್ರಕರಣ ಬಯಲಾಗಿತ್ತು. ಇಂದು ಬೆಳಗ್ಗೆ ಸಿಂಧಗಿಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


Spread the love