ಮನಪಾ ಚುನಾವಣೆ ಟಿಕೇಟ್ ಹಂಚಿಕೆ – ಬಾವಾ ಹಾಗೂ ಮಾಜಿ ಮೇಯರ್ ಗುಲ್ಜಾರ್ ಬಾನು ಬೆಂಬಲಿಗರ ಹೊಯ್ ಕೈ

Spread the love

ಮನಪಾ ಚುನಾವಣೆ ಟಿಕೇಟ್ ಹಂಚಿಕೆ – ಬಾವಾ ಹಾಗೂ ಮಾಜಿ ಮೇಯರ್ ಗುಲ್ಜಾರ್ ಬಾನು ಬೆಂಬಲಿಗರ ಹೊಯ್ ಕೈ

ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಸ್ಪರ್ಧಿಸಲು ಟಿಕೆಟ್ ಹಂಚಿಕೆಗೆ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದ್ದು ಮಾಜಿ ಶಾಸಕ ಮೊಯ್ದಿನ್ ಬಾವಾ-ಮಾಜಿ ಮೇಯರ್ ಗುಲ್ಝಾರ್ ಬಾನು ಬೆಂಬಲಿಗರ ಮಧ್ಯೆ ಬುಧವಾರ ರಾತ್ರಿ ಮಾತಿನ ಚಕಮಕಿ ನಡೆದಿದೆ.

ನ.12ರಂದು ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರು ನಗರದ ಖಾಸಗಿ ಹೊಟೇಲಿನಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಡುಗಡೆಗೊಳಿಸಿದ್ದರು. ಸುದ್ದಿಗೋಷ್ಠಿ ಮುಗಿಸಿ ಹೊರಗಡೆ ಬರುವಾಗ ಗುಲ್ಝಾರ್ ಬಾನು ಹಾಗೂ ಶಾಸಕ ಮೊಯ್ದಿನ್ ಬಾವ ಅವರ ಬೆಂಬಲಿಗರ ನಡುವೆ ಹೊಯ್ ಕೈ ನಡೆದಿದೆ.

ಹಿಂದಿನ ಮಹಾನಗರಪಾಲಿಕೆ ಚುನಾವಣೆಯಲ್ಲಿ ಗುಲ್ಜಾರ್ ಭಾನು ಅವರು ಸೋತಿದ್ದು ಮತ್ತೆ ಟಿಕೇಟ್ ನೀಡುವುದಾಗಿ ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರು ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ ಟಿಕೇಟ್ ನೀಡದ ಹಿನ್ನಲೆಯಲ್ಲಿ ಗುಲ್ಜಾರ್ ಬಾನು ಪುತ್ರ ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು ಇದೇ ವೇಳೆ ಪರಸ್ಪರ ಹೊಯ್ ಕೈ ಕೂಡ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೊನೆಗೆ ಪಕ್ಷದ ಹಿರಿಯ ಮುಖಂಡರು ಇತ್ತಂಡವನ್ನು ಸಮಾಧಾನ ಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು.


Spread the love