ಮಳೆಗಾಗಿ ಶಾಸಕ ಡಿ ವೇದವ್ಯಾಸ ಕಾಮತ್ ಶರವು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಪ್ರಾರ್ಥನೆ

Spread the love

ಮಳೆಗಾಗಿ ಶಾಸಕ ಡಿ ವೇದವ್ಯಾಸ ಕಾಮತ್ ಶರವು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಪ್ರಾರ್ಥನೆ

ಮಂಗಳೂರು: ಮಂಗಳೂರು ಮಹಾನಗರದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ಶೀಘ್ರದಲ್ಲಿ ಮಳೆ ಬಂದು ನಾಗರಿಕರಿಗೆ ಅತ್ಯವಶ್ಯಕವಾದ ನೀರು ಸಿಗುವಂತಾಗಲು ದೇವರು ಅನುಗ್ರಹಿಸಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಶರವು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭ ಶಾಸಕರೊಂದಿಗೆ ದೇವಸ್ಥಾನದ ಮೊಕ್ತೇಸರ ರಾಘವೇಂದ್ರ ಶಾಸ್ತ್ರಿ, ಮಾಜಿ ಮನಪಾ ಸದಸ್ಯರಾದ ಪೂರ್ಣಿಮಾ, ಚಂದ್ರಕಾಂತ ನಾಯಕ್, ವಾರ್ಡ್ ಬಿಜೆಪಿ ಅಧ್ಯಕ್ಷ ಮುರಳಿಧರ ನಾಯಕ್, ಬಿಜೆಪಿ ಮುಖಂಡರಾದ ವಸಂತ ಜೆ ಪೂಜಾರಿ, ದೇವದಾಸ್ ಪಾಂಡೇಶ್ವರ, ಪೂರ್ಣಿಮಾ ರಾವ್, ರಮೇಶ್ ಹೆಗ್ಡೆ, ಸುಧಾಕರ ಜೋಷಿ, ಸೂರಜ್, ಶಿವಾನಂದ,ಮೋಹನ್ ಆಚಾರ್ಯ, ಗೋಪಾಲಕೃಷ್ಣ ಭಟ್ ಸಹಿತ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love