ಮಸೀದಿ ಇಮಾಮರ ಗೌರವಧನ – ಕರ್ತವ್ಯ ದೃಢಪತ್ರ ನೀಡಲು ಸೂಚನೆ

Spread the love

ಮಸೀದಿ ಇಮಾಮರ ಗೌರವಧನ – ಕರ್ತವ್ಯ ದೃಢಪತ್ರ ನೀಡಲು ಸೂಚನೆ

ಮಂಗಳೂರು : ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ಗೌರವಧನ ಪಡೆಯುತ್ತಿರುವ ಪೇಶ್ ಇಮಾಮ್ ಮತ್ತು ಮೌಝನ್ (ಮುಕ್ರಿ)ರವರು ಅಕ್ಟೋಬರ್ ತಿಂಗಳಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ತಾವು ಕೆಲಸ ನಿರ್ವಹಿಸುತ್ತಿರುವ ಮಸೀದಿಯ ಅಧ್ಯಕ್ಷರು/ ಕಾರ್ಯದರ್ಶಿಯವರಿಂದ ದೃಢೀಕರಣ ಪತ್ರದ ಜೊತೆಗೆ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ಝೆರಾಕ್ಸ್ ಪ್ರತಿಗಳನ್ನು (ಇಂದಿನವರೆಗೆ ಅಪ್‍ಡೇಟ್) ಜಿಲ್ಲಾ ವಕ್ಫ್ ಕಛೇರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇಲ್ಲಿಗೆ ಅಕ್ಟೋಬರ್ 26ರೊಳಗೆ ದ್ವಿಪ್ರತಿಯಲ್ಲಿ ಕಡ್ಡಾಯವಾಗಿ ಖುದ್ದು ಕಚೇರಿಗೆ ತಾವೇ ಸಲ್ಲಿಸಬೇಕು ಎಂದು ಜಿಲ್ಲಾ ವಕ್ಫ್ ಅಧಿಕಾರಿ ಇವರ ಪ್ರಕಟಣೆ ತಿಳಿಸಿದೆ.


Spread the love