ಮಹಿಳೆಯ ಕೊಲೆ ಮತ್ತು ದರೋಡೆ – ಶೂಟೌಟ್ ಮಾಡಿ ಆರೋಪಿಗಳನ್ನು ಬಂಧಿಸಿದ ಹೆಬ್ಬಗೋಡಿ ಪೊಲೀಸರು

Spread the love

ಮಹಿಳೆಯ ಕೊಲೆ ಮತ್ತು ದರೋಡೆ – ಶೂಟೌಟ್ ಮಾಡಿ ಆರೋಪಿಗಳನ್ನು ಬಂಧಿಸಿದ ಹೆಬ್ಬಗೋಡಿ ಪೊಲೀಸರು

ಬೆಂಗಳೂರು: ಮಹಿಳೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ವೇಳೆ ಶೂಟೌಟ್ ಮಾಡಿ ಆರೋಪಿಗಳನ್ನು ಬಂಧಿಸಿದ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಆರೋಪಿಗಳನ್ನು ವೇಲು ಅಲಿಯಾಸ್ ಸೈಕೋ (23) ಮತ್ತು ಬಾಲಕೃಷ್ಣ ಅಲಿಯಾಸ್ ಬಾಲು (27) ಎಂದು ಗುರುತಿಸಲಾಗಿದೆ.

ಬೆಂಗಳೂರು ಜಿಲ್ಲೆ, ಹೆಬ್ಬಗೋಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಸಿಂಗೇನ ಅಗ್ರಹಾರ ಗ್ರಾಮದಲ್ಲಿ ಸೆಪ್ಟೆಂಬರ್ 10 ರಂದು ಶ್ರೀಮತಿ ಶ್ವೇತ ಎಂಬ ಗೃಹಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿ, ಚಿನ್ನಾಭರಣ ದೋಚಿದ್ದ ಆರೋಪಿಗಳಾದ ವೇಲು ಅಲಿಯಾಸ್ ಸೈಕೋ, ಹಾಗೂ ಬಾಲಕೃಷ್ಣ ಅಲಿಯಾಸ್ ಬಾಲು, 27 ವರ್ಷ ರವರುಗಳನ್ನು ಮಂಗಳವಾರ ಬೆಳಗಿನ ಜಾವ ಸುಮಾರು 5 ಗಂಟೆಗೆ ಆನೆಕಲ್ ಪಟ್ಟಣದಿಂದ ಮುತ್ಯಾಲಮಡುವುಗೆ ಹೋಗುವ ರಸ್ತೆಯಲ್ಲಿ ಆರೋಪಿಗಳನ್ನು ಬಂಧಿಸಲು ತೆರಳಿದ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗೌತಮ್ ಹಾಗೂ ಬನ್ನೇರ್ಘಟ್ಟ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗೋವಿಂದ್ ಹಾಗೂ ಸಿಬ್ಬಂದಿಗಳ ಮೇಲೆ ಆರೋಪಿಗಳು ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿ, ಕೊಲೆ ಮಾಡಲು ಪ್ರಯತ್ನಿಸಿದ್ದು ಆರೋಪಿಗಳಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಆರೋಪಿಗಳ ಬಲಗಾಲಿಗೆ ಗುಂಡೇಟು ತಗುಲಿದ್ದು, ಆನೆಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಹೆಬ್ಬಗೋಡಿ ಪೊಲೀಸ್ ಠಾಣೆಯ ಪಿ.ಸಿ-1398 ಶಿವಕುಮಾರ ರವರ ಎಡಗೈಗೆ ರಕ್ತಗಾಯವಾಗಿರುತ್ತದೆ.


Spread the love