ಮಾಜಿ ಸಚಿವ, ಜೆಡಿಎಸ್ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ನಿಧನ

Spread the love

ಮಾಜಿ ಸಚಿವ, ಜೆಡಿಎಸ್ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ನಿಧನ

ಮಂಗಳೂರು: ಮಾಜಿ ಸಚಿವ,ಜೆಡಿಎಸ್ ನ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಮೂಡಬಿದರೆ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಜನತಾದಳದಿಂದ ಸ್ಪರ್ಧಿಸಿ ಶಾಸಕರಾದ ಅಮರನಾಥ ಶೆಟ್ಟಿಯವರು ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗದ್ದರು.

1983 ರಲ್ಲಿ ಮೊದಲ ಬಾರಿಗೆ ಶಾಸಕರಾದ ಅವರು ಜನತಾ ಪರಿವಾರದ ಸರ್ಕಾರಗಳಲ್ಲಿ ಸಚಿವರಾಗಿದ್ದರು (ಪ್ರವಾಸೋದ್ಯಮ, ಧಾರ್ಮಿಕ ದತ್ತಿ, APMC, ಬಂದರು-ಮೀನುಗಾರಿಕೆ, ಕಾರ್ಮಿಕ). 1999 ರಲ್ಲಿ ಜೆ ಎಚ್ ಪಟೇಲ್ ಸರ್ಕಾರದಲ್ಲಿ ಸಚಿವರಾಗಿದ್ದ ಅವರು ಅಲ್ಲಿಂದೀಚೆಗೆ ಚುನಾವಣೆಗಳಲ್ಲಿ ಮೂರು ಬಾರಿ ಸತತವಾಗಿ ಸೋತ ಬಳಿಕ 2016 ರಲ್ಲಿ ರಾಜಕೀಯದಿಂದ ವಿಶ್ರಾಂತರಾಗಿದ್ದರು.

ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು.


Spread the love