ಮೀನು‌ ಹಿಡಿಯಲು ಹೋದ ಈರ್ವರು ನದಿಯಲ್ಲಿ ಮುಳುಗಿ ಸಾವು

Spread the love

ಮೀನು‌ ಹಿಡಿಯಲು ಹೋದ ಈರ್ವರು ನದಿಯಲ್ಲಿ ಮುಳುಗಿ ಸಾವು

ಬ್ರಹ್ಮಾವರ: ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ಕೂರು ಹೊಸಾಳ ಸಮೀಪದ ಸೀತಾ ನದಿಯಲ್ಲಿ ಸಂಭವಿಸಿದೆ.

ಹೊಸಾಳ ನಿವಾಸಿಗಳಾದ ಪ್ರಶಾಂತ (35) ಹಾಗೂ ಶ್ರೀಶಾ(21) ಸಾವನ್ನಪ್ಪಿದ ದುರ್ದೈವಿಗಳು.

ಮಂಗಳವಾರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಪ್ರಶಾಂತ್ ಹಾಗೂ ಶ್ರೀಶಾ ಮನೆ ಸಮೀಪದ‌ ಕೂಗಳತೆ ದೂರದ ಸೀತಾ ನದಿಗೆ ಮೀನು ಹಿಡಿಯಲು ತೆರಳಿದ್ದರು. ಮೀನಿಗಾಗಿ ಬಲೆ‌ ಹಾಕುತ್ತಿರುವ‌ ಸಂದರ್ಭ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.

ಸಮೀಪದಲ್ಲೇ‌ ಬಟ್ಟೆ ತೊಳೆಯುತ್ತಿದ್ದ ಮಹಿಳೆ ಗಮನಿಸಿ ಸ್ಥಳೀಯರಿಗೆ ಸುದ್ದಿ ಮುಟ್ಟಿಸಿದ್ದರು. ಸ್ಥಳೀಯರು ಸ್ಥಳಕ್ಕೆ ಧಾವಿಸುವಷ್ಟರಲ್ಲೇ ಈರ್ವರು ಸಾವನ್ನಪ್ಪಿದ್ದಾರೆ.

ಬ್ರಹ್ಮಾವರ ಠಾಣಾಧಿಕಾರಿ ಮಧು ಪಿ.ಎಸ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.


Spread the love