ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂ.ಆರ್.ಪಿ.ಎಲ್ ಒಂದು ಕೋಟಿ ರೂ. ನೆರವು 

Spread the love

ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂ.ಆರ್.ಪಿ.ಎಲ್ ಒಂದು ಕೋಟಿ ರೂ. ನೆರವು  

ಮಂಗಳೂರು : ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ಎಂ.ಆರ್.ಪಿ.ಎಲ್. ಸಂಸ್ಥೆ ವತಿಯಿಂದ ರೂ. 1 ಕೋಟಿಯ ನೆರವನ್ನು ನೀಡಲಾಗಿದೆ.

ಶುಕ್ರವಾರ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಒಂದು ಕೋಟಿ ರೂ. ಚೆಕ್ ಅನ್ನು ಎಂಆರ್‍ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ವೆಂಕಟೇಶ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನೀಡಿದರು. ಈ ಸಂದರ್ಭದಲ್ಲಿ ಎಂಆರ್‍ಪಿಎಲ್ ಹಣಕಾಸು ನಿರ್ದೇಶಕ ಎ.ಕೆ. ಸಾಹೂ, ಗ್ರೂಪ್ ಜನರಲ್ ಮೆನೇಜರ್ ಬಿ.ಎಚ್.ವಿ. ಪ್ರಸಾದ್ ಮತ್ತಿತರರು ಈ ಸಂದರ್ಭದಲ್ಲಿದ್ದರು.


Spread the love